
ನವದೆಹಲಿ(ಅ.30): ಪ್ರಧಾನಿ ನರೇಂದ್ರ ಮೋದಿ ಸೇವೆಯಲ್ಲಿ ಕನ್ನಡಿಗರ ಸಂಖ್ಯೆ ಹೆಚ್ಚಾಗಿದೆ. ನಿನ್ನೆ ಧರ್ಮಸ್ಥಳಕ್ಕೆ ಮೋದಿ ಭೇಟಿ ನೀಡಿದರು. ಈ ವೇಳೆ ಮೋದಿ ಕಾರ್ ಡ್ರೈವರ್ ಮಾಡಿದ್ದು ಒಬ್ಬ ಕನ್ನಡಿಗ. ಕೇಳಲು ಆಶ್ಚರ್ಯ ಅನ್ನಿಸಿದ್ರು ಇದು ಸತ್ಯ.
ಪ್ರಧಾನಿ ನರೇಂದ್ರ ಮೋದಿ ಡ್ರೈವರ್ ಕರ್ನಾಟಕ ಮೂಲದ ಮಾರಪ್ಪ. ಚಾಮರಾಜನಗರ ಜಿಲ್ಲೆಯ ರಾಜಪ್ಪ ಮತ್ತು ನಾಗರಾಜಮ್ಮ ದಂಪತಿ ಪುತ್ರ ಮಾರಪ್ಪ. ಈ ಮಾರಪ್ಪ. ಎಸ್ ಜಿಪಿ ಸಿಬ್ಬಂದಿಯಾಗಿದ್ದು, ಹಲವು ದಿನಗಳಿಂದ ಪ್ರಧಾನಿ ಮೋದಿ ಬಳಿಯೇ ಕಾರು ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿನ್ನೆ ಕೂಡ ಪ್ರಧಾನಿ ನರೇಂದ್ರ ಮೋದಿ ಕಾರ್ ಓಡಿಸುವ ಸಲುವಾಗಿಯೇ ಡ್ರೈವರ್ ಮಾರಪ್ಪ.
ಮೊನ್ನೆಯೇ ದೆಹಲಿಯಿಂದ ಧರ್ಮಸ್ಥಳಕ್ಕೆ ಆಗಮಿಸಿದ್ದರು. ಮೋದಿ ಆಗಮನಕ್ಕೂ ಮುನ್ನವೇ ರಸ್ತೆ ಮಾರ್ಗದ ಸಂಪೂರ್ಣ ಮಾಹಿತಿ ಕೂಡ ಕಲೆಹಾಕಿದ್ದರಂತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.