
ಬಂಡಿಪೋರಾ: ಬಿಎಸ್ಎಫ್ ಯೋಧರಿಗೆ ಸಿಹಿ ತಿನ್ನಿಸುವ ಮೂಲಕ ಪ್ರಧಾನಿ ಮೋದಿ ಈ ಬಾರಿಯ ದೀಪಾವಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೇಝ್ ಕಣಿವೆಗೆ ತೆರಳಿದ ಪ್ರಧಾನಿ ಮೋದಿ, ಯೋಧರೊಂದಿಗೆ ಸುಮಾರು 2 ತಾಸುಗಳನ್ನು ಕಳೆದರು.
ಯೋಧರು ತನ್ನ ಕುಟುಂಬ ಸದಸ್ಯರಿದ್ದಂತೆ ಎಂದ ಪ್ರಧಾನಿ ಮೋದಿ, ಯೋಧರ ಜೊತೆ ಸಮಯ ಕಳೆಯುವುದರಿಂದ ಹೊಸ ಚೈತನ್ಯ ಸಿಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.
ಯೋಧರೊಂದಿಗೆ ಇಂದು ಮಾತುಕತೆ ನಡೆಸಿದೆ, ಯೋಧರು ಪ್ರತಿದಿನ ಯೋಗಾಭ್ಯಾಸ ನಡೆಸುತ್ತಾರೆಂದು ತಿಳಿದು ಸಂತೋಷವಾಯಿತು ಎಂದು ಪ್ರಧಾನಿ ಮೋದಿ ಟ್ವೀಟಿಸಿದ್ದಾರೆ.
ಸೇನೆ ಹಾಗೂ ಯೋಧರ ಶ್ರೇಯೋಭಿವೃದ್ಧಿಗೆ ಸರ್ಕಾರವು ಬದ್ಧವಾಗಿದೆ ಎಂದು ಪ್ರಧಾನಿ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.