ಲೆನಿನ್, ಅಂಬೇಡ್ಕರ್ ಪ್ರತಿಮೆ ಧ್ವಂಸ ರಾಜಕೀಯ; ಮೋದಿ ತೀವ್ರ ಖಂಡನೆ

Published : Mar 07, 2018, 04:15 PM ISTUpdated : Apr 11, 2018, 01:05 PM IST
ಲೆನಿನ್, ಅಂಬೇಡ್ಕರ್ ಪ್ರತಿಮೆ ಧ್ವಂಸ ರಾಜಕೀಯ; ಮೋದಿ ತೀವ್ರ ಖಂಡನೆ

ಸಾರಾಂಶ

ತ್ರಿಪುರಾ, ಮೀರತ್’ನಲ್ಲಿ ನಡೆದ ಲೆನಿನ್, ಅಂಬೇಡ್ಕರ್ ಪ್ರತಿಮೆ ಧ್ವಂಸ ರಾಜಕೀಯವನ್ನು ಪ್ರಧಾನಿ ನರೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. 

ನವದೆಹಲಿ (ಮಾ. 07): ತ್ರಿಪುರಾ, ಮೀರತ್’ನಲ್ಲಿ ನಡೆದ ಲೆನಿನ್, ಅಂಬೇಡ್ಕರ್ ಪ್ರತಿಮೆ ಧ್ವಂಸ ರಾಜಕೀಯವನ್ನು ಪ್ರಧಾನಿ ನರೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. 

ಈ ಬಗ್ಗೆ ಮೋದಿ ಗೃಹ ಸಚಿವ ರಾಜನಾಥ್ ಸಿಂಗ್ ಜೊತೆ ಮಾತುಕತೆ ನಡೆಸಿದ್ದು ಘಟನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.  ಗೃಹ ಸಚಿವಾಲಯವು ಆಯಾ ರಾಜ್ಯಗಳ ಜೊತೆ ಮಾತುಕತೆ ನಡೆಸಿದ್ದು ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. 

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಪಕ್ಷದ ಕಾರ್ಯಕರ್ತರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ತ್ರಿಪುರಾ, ತಮಿಳುನಾಡು ಬಿಜೆಪಿ ಘಟಕದ ಜೊತೆ ಮಾತನಾಡಿದ್ದೇನೆ. ಪ್ರತಿಮೆ ಧ್ವಂಸ ಕೃತ್ಯದಲ್ಲಿ ಬಿಜೆಪಿಯವರ ಯಾರಾದರೂ ಭಾಗಿಯಾಗಿದ್ದರೆ ಪಕ್ಷ ಅಂತವರ ಮೇಲೆ ಕ್ರಮ ಕೈಗೊಳ್ಳುತ್ತದೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅ.1ರಿಂದ ಜನವರಿ 31ರ ವರೆಗೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ
ಕಂದಾಯ ಸಚಿವ ಕೃಷ್ಣಬೈರೇಗೌಡ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವ ಗಂಭೀರ ಆರೋಪ