
ನವದೆಹಲಿ (ಮಾ.11): ಪಂಚರಾಜ್ಯ ಚುನಾವಣಾ ಫಲಿತಾಂಶದ ಬಗ್ಗೆ ಚಿತ್ತ ನೆಟ್ಟಿರುವ ಮಧ್ಯದಲ್ಲೇ ಪ್ರಧಾನಿ ನರೇಂದ್ರ ಮೋದಿ ಪಂಜಾಬ್ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಅಮರಿಂದರ್ ಸಿಂಗ್ ಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಅಮರಿಂದರ್ ಜೊತೆ ಮಾತನಾಡಿದ್ದೇನೆ. ಪಂಜಾಬ್ ಗೆಲುವಿಗಾಗಿ ಅಭಿನಂದಿಸುತ್ತೇನೆ. ಅದೇ ರೀತಿ ಹುಟ್ಟುಹಬ್ಬದ ಶುಭಾಶಯಗಳು. ಅವರು ದೀರ್ಘಾಯುಷುಯಾಗಲಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಪಂಜಾಬಿನ ಈ ಗೆಲುವು ನನ್ನ ಹುಟ್ಟುಹಬ್ಬಕ್ಕೆ ಕೊಟ್ಟ ದೊಡ್ಡ ಉಡುಗೊರೆ. ಪಂಜಾಬಿನ ಜನರು ಬಹಳ ಸಂವೇದನಾಶೀಲರು. ನಾನವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಅಮರಿಂದರ್ ಸಿಂಗ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.