
ಶಮ್ಲಿ (ಉ.ಪ್ರ): ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಯುವಜನತೆಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತೇನೆಂದು ಸುಳ್ಳು ಭರವಸೆ ನೀಡಿ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ರೈತರ ಆತ್ಮಹತ್ಯೆಗಳ ಬಗ್ಗೆ ಪ್ರಸ್ತಾಪಿಸುತ್ತಾ, ರೈತರ ಸಂಕಷ್ಟಗಳ ಕಡೆ ಗಮನ ನೀಡಲು ಪ್ರಧಾನಿಯವಿಗೆ ಸಮಯವಿಲ್ಲ. ತಮ್ಮ ಸಂಕಷ್ಟಗಳನ್ನು ಮೋದಿ ಆಲಿಸಿ ಬಗೆಹರಿಸುತ್ತಾರೆ ಎನ್ನುವ ನಿರೀಕ್ಷೆ ರೈತರಿಗಿದೆ. ಆದರೆ ಮೋದಿಯವರಿಗೆ ಸಮಯವಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
SCAM ಗೆ ಹೊಸ ವ್ಯಾಖ್ಯಾನ ನೀಡಿದ ಮೋದಿಗೆ ಪ್ರತ್ಯುತ್ತರ ನೀಡುತ್ತಾ, ಸ್ಕಾಮ್ ನಲ್ಲಿ ಭಾಗಿಯಾದವರಿಗೆ ಎಲ್ಲಾ ಕಡೆಯೂ ಅದೇ ಕಾಣಿಸುತ್ತದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.