
ಚೆನ್ನೈ (ನ.10): 500 ಹಾಗೂ 1000 ಮುಖಬೆಲೆಯ ನೋಟಿನ ರದ್ದಿನಿಂದ ಕಪ್ಪುಹಣ ಹೊರಬರುತ್ತದೆ ಎಂದು ಪ್ರಧಾನಿ ಮೋದಿ ಹೇಳಿ ಜನರನ್ನು ಸಮಾಧಾನಪಡಿಸುವಂತ ಮಾತನಾಡುತ್ತಿದ್ದರೆ ಇಲ್ಲಿ ಮಗಳ ಮದುವೆಯನ್ನು ಹೇಗೆ ಮಾಡುವುದು ಎಂದು ತಂದೆ ತಾಯಿ ಕಂಗಾಲಾಗಿದ್ದಾರೆ.
ಇಲ್ಲಿನ ನಿವಾಸಿಯೊಬ್ಬರ ಮಗಳ ಮದುವೆ ನಾಳೆ ನಡೆಯಬೇಕಿದ್ದು ಸಂಜೆ ಆರತಕ್ಷತೆ ನಡೆಯಲಿದೆ. ಬ್ಯಾಂಕಿಗೆ ಹೋಗಿ ಹೆಚ್ಚಿನ ಮೊತ್ತದ ಹಣ ಕೇಳಿದರೆ 4 ಸಾವಿರಕ್ಕಿಂತ ಜಾಸ್ತಿ ಕೊಡಲು ಬ್ಯಾಂಕ್ ಸಿಬ್ಬಂದಿ ನಿರಾಕರಿಸಿದ್ದಾರೆ.
ಮದುವೆ ಆಮಂತ್ರಣ ಪತ್ರಿಕೆ ತೋರಿಸಿ ಪರಿಪರಿಯಾಗಿ ಕೇಳಿಕೊಂಡರೂ ಹೆಚ್ಚಿನ ಹಣ ನೀಡಲು ಒಪ್ಪಲಿಲ್ಲ. ಇದು ಕುಟುಂಬದವರನ್ನು ಚಿಂತೆಗೀಡು ಮಾಡಿದೆ. ಸ್ನೇಹಿತರು ಹಾಗೂ ಸಂಬಂಧಿಕರು ಸಹಾಯಕ್ಕೆ ಮುಂದಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.