ರಿಸಲ್ಟ್ ಬಗ್ಗೆ ಮಾತಾಡಿ ಅಂದ್ರೆ ಪಾರ್ಲಿಮೆಂಟ್ ಒಳಹೊಕ್ಕ ಮೋದಿ!

Published : Dec 11, 2018, 10:56 AM ISTUpdated : Dec 11, 2018, 11:36 AM IST
ರಿಸಲ್ಟ್ ಬಗ್ಗೆ ಮಾತಾಡಿ ಅಂದ್ರೆ ಪಾರ್ಲಿಮೆಂಟ್ ಒಳಹೊಕ್ಕ ಮೋದಿ!

ಸಾರಾಂಶ

ಪಂಚ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಮಾತನಾಡದ ಪ್ರಧಾನಿ| ಸಂಸತ್ತಿನ ಎದುರಿಗೆ ಮಾಧ್ಯಮಗಳೊಂದಿಗೆ ಪ್ರಧಾನಿ ಮೋದಿ ಮಾತುಕತೆ| ಚಳಿಗಾಲದ ಅಧಿವೇಶನದ ಯಶಸ್ಸಿಗೆ ವಿಪಕ್ಷಗಳನ್ನು ಆಗ್ರಹಿಸಿದ ಪ್ರಧಾನಿ| ಚುನಾವಣೆ ಫಲಿತಾಂಶದ ಕುರಿತು ಪ್ರತಿಕ್ರಿಯೆ ನೀಡಲು ನಕಾರ  

ನವದೆಹಲಿ(ಡಿ.11): ಇಂದು ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು, ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸಂಸತ್ತಿನ ಚಳಿಗಾಲದ ಅಧಿವೇಶವನ್ನು ಪ್ರತಿಪಕ್ಷಗಳ ಸಹಕಾರದೊಂದಿಗೆ ಯಶಸ್ವಿಯಾಗಿ ನಡೆಸುವ ಭರವಸೆಯನ್ನು ಈ ವೇಳೆ ಪ್ರಧಾನಿ ಮೋದಿ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾತು, ಚರ್ಚೆ, ಮನಸ್ತಾಪ ಇವೆಲ್ಲವೂ ಸಾಮಾನ್ಯ. ಪ್ರತಿಪಕ್ಷಗಳ ಟೀಕೆಗಳನ್ನು ಸ್ವೀಕರಿಸಿ ಅರ್ಥಪೂರ್ಣ ಅಧಿವೇಶನ ನಡೆಸಲಾಗುವುದು ಎಂದು ಮೋದಿ ಹೇಳಿದರು.

ಈ ಮಧ್ಯೆ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸದೇ ಮೋದಿ ಸಂಸತ್ತಿನ ಒಳಗೆ ಪ್ರವೇಶ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?