
ನವದೆಹಲಿ (ಡಿ.25): ಪ್ರಧಾನಿ ನರೇಂದ್ರ ಮೋದಿ ಬೊಟಾನಿಕಲ್ ಗಾರ್ಡನ್ ಮೆಟ್ರೋ ಸ್ಟೇಷನ್'ಗೆ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಪಾಲ ರಾಮ್ ನಾಯಕ್ ಉಪಸ್ಥಿತರಿದ್ದರು. ಉದ್ಘಾಟನೆ ಮಾಡಿದ ನಂತರ ಮೂವರು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಅಚ್ಚರಿ ಎಂದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್'ಗೆ ಆಹ್ವಾನವನ್ನೇ ನೀಡಿಲ್ಲ.
ದೆಹಲಿ ಹಾಗೂ ನೋಯ್ಡಾ ನಡುವೆ 12.64 ಕಿಮೀ ಅಂತರವಿದ್ದು ಬೊಟಾನಿಕಲ್ ಗಾರ್ಡನ್ ಮೆಟ್ರೋ ಕೇವಲ 45 ನಿಮಿಷಗಳಲ್ಲಿ ಇವೆರಡೂ ನಗರಗಳನ್ನು ಸೇರಿಸಲಿದೆ. ಇಂದು ಸಂಜೆ 5 ಗಂಟೆಯಿಂದ ಸಾರ್ವಜನಿಕರಿಗೆ ಮೆಟ್ರೋ ಸೌಲಭ್ಯ ಸಿಗಲಿದೆ.
ಪ್ರಧಾನಿ ಮೋದಿ ಆಗಮನದ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬೇರೆ ಬೇರೆ ರಾಜ್ಯಗಳಿಂದ ಭದ್ರತಾ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.