ರೈತರಿಗೆ ಶುಭ ಸುದ್ದಿ : ಮೋದಿ ಸರ್ಕಾರದಿಂದ ಭರ್ಜರಿ ಬೆಂಬಲ ಬೆಲೆ..?

Published : Jul 02, 2018, 11:00 AM IST
ರೈತರಿಗೆ ಶುಭ ಸುದ್ದಿ : ಮೋದಿ ಸರ್ಕಾರದಿಂದ ಭರ್ಜರಿ ಬೆಂಬಲ ಬೆಲೆ..?

ಸಾರಾಂಶ

ಮುಂಗಾರು ಬೆಳೆಗಳ ಪೈಕಿ ಅತ್ಯಂತ ಪ್ರಮುಖವಾದ ಭತ್ತಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ  ಕ್ವಿಂಟಾಲ್‌ಗೆ 1750 ರು. ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಸಾಧ್ಯತೆ ಇದೆ. 

ನವದೆಹಲಿ: ಮುಂಗಾರು ಬೆಳೆಗಳಿಗೆ ಉತ್ಪಾದನಾ ವೆಚ್ಚದ ಶೇ. 150 ರಷ್ಟು ಕನಿಷ್ಠ ಬೆಂಬಲ ಬೆಲೆ ಘೋಷಿಸುವುದಾಗಿ ಪ್ರಧಾನಿ ನರೇಂದ್ರ  ಮೋದಿ ಇತ್ತೀಚೆಗೆ ತಮ್ಮನ್ನು ಭೇಟಿಯಾಗಿದ್ದ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ರೈತ ಪ್ರತಿನಿಧಿಗಳಿಗೆ ಭರವಸೆ ನೀಡಿದ್ದರು. ಮೂಲಗಳ ಪ್ರಕಾರ ಮುಂಗಾರು ಬೆಳೆಗಳ ಪೈಕಿ ಅತ್ಯಂತ ಪ್ರಮುಖವಾದ ಭತ್ತಕ್ಕೆ ಕ್ವಿಂಟಾಲ್‌ಗೆ 1750 ರು. ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಸಾಧ್ಯತೆ ಇದೆ. 

2018 - 19 ರ ಸಾಲಿಗೆ ಘೋಷಿಸಲಾಗುವ ಈ ಕನಿಷ್ಠ ಬೆಂಬಲ ಬೆಲೆ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.13ರಷ್ಟು ಏರಿಕೆಯಾಗಲಿದೆ. ಉಳಿದಂತೆ ಮುಂಗಾರು ಹಂಗಾಮಿನಲ್ಲಿ ಬೆಳೆಯಲಾಗುವ ಇತರೆ 13 ಬೆಳೆಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಕನಿಷ್ಠಬೆಂಬಲ ಬೆಲೆ ಘೋಷಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗಿದೆ. 

ಭತ್ತಕ್ಕೆ ಶೇ.13ರಷ್ಟು ಏರಿಕ ಲೆಕ್ಕಹಾಕಿದರೆ ಅದು ಕ್ವಿಂಟಾಲ್‌ಗೆ 200 ರು.ವರೆಗೆ ಏರಿಕೆಯಾಗಲಿದೆ. ಹಾಲಿ ಸಾಮಾನ್ಯ ದರ್ಜೆಯ ಭತ್ತಕ್ಕೆ  ಕ್ವಿಂಟಾಲ್‌ಗೆ 1 550 ರು., ಉತ್ತಮ ಗುಣಮಟ್ಟದ ಭತ್ತಕ್ಕೆ 1590 ರು. ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ