ಕುದಿಯುತ್ತಿರುವ ಕೇರಳದಲ್ಲಿ ಮೋದಿ: ಒಂದೇ ಮಂತ್ರ ಅಭಿವೃದ್ಧಿ!

Published : Jan 15, 2019, 06:10 PM ISTUpdated : Jan 15, 2019, 07:40 PM IST
ಕುದಿಯುತ್ತಿರುವ ಕೇರಳದಲ್ಲಿ ಮೋದಿ: ಒಂದೇ ಮಂತ್ರ ಅಭಿವೃದ್ಧಿ!

ಸಾರಾಂಶ

ಕೇರಳಕ್ಕೆ ಪ್ರಧಾನಿ ಮೋದಿ ಭೇಟಿ| ಕೊಲ್ಲಮ್ ಬೈಪಾಸ್ ರಸ್ತೆ ಉದ್ಘಾಟನೆ| ಮೋದಿ ಸ್ವಾಗತಿಸಿದ ಸಿಎಂ ಪಿಣರಾಯಿ ವಿಜಯನ್| ಅಭಿವೃದ್ಧಿಯೇ ಕೇಂದ್ರ ಸರ್ಕಾರದ ಮಂತ್ರ ಎಂದ ಪ್ರಧಾನಿ| ಕೇರಳ ಜನರ ಭಕ್ತಿ ಮತ್ತು ಶಕ್ತಿಗೆ ಮೋದಿ ಪ್ರಶಂಸೆ

ಕೊಲ್ಲಮ್(ಜ.15): ಶಬರಿಮಲೆ ವಿವಾದದಿಂದಾಗಿ ಕುದಿಯುತ್ತಿರುವ ಕೇರಳಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. 

ಇಲ್ಲಿನ ರಾಷ್ಟ್ರೀಯ ಹೆದ್ದಾರಿ ನಂ.66ರಲ್ಲಿ ಕೊಲ್ಲಮ್ ಬೈಪಾಸ್ ರಸ್ತೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಒಡಿಶಾದಿಂದ ವಿಮಾನದ ಮೂಲಕ ನೇರವಾಗಿ ಕೊಲ್ಲಮ್ ಗೆ ತಲುಪಿದ ಮೋದಿ ಅವರನ್ನು ಸಿಎಂ ಪಿಣರಾಯಿ ವಿಜಯನ್, ರಾಜ್ಯಪಾಲ ಪಳನಿಸ್ವಾಮಿ ಸದಾಶಿವಂ  ಸೇರಿದಂತೆ ಪ್ರಮುಖ ಗಣ್ಯರು ಬರಮಾಡಿಕೊಂಡರು.

ಬಳಿಕ ಕೊಲ್ಲಮ್ ಬೈಪಾಸ್ ರಸ್ತೆ ಉದ್ಘಾಟಿಸಿದ ಪ್ರಧಾನಿ ಮೋದಿ, ಅಭಿವೃದ್ಧಿ ಯೋಜನೆಗಳ ವಿಳಂಬ ನೀತಿಯನ್ನು ತಮ್ಮ ಸರ್ಕಾರ ಕೊನೆಗಾಣಿಸಿದ್ದು, ತ್ವರಿತಗತಿಯ ಅಭಿವೃದ್ಧಿ ಕಾಮಗಾರಿಗೆ ಒತ್ತು ನೀಡುತ್ತದೆ ಎಂದು ಹೇಳಿದರು.

ಕೇರಳದ ಜನತೆ ಭಕ್ತಿ ಮತ್ತು ಶಕ್ತಿಯ ಸಹಾಯದಿಂದ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸುತ್ತಿದ್ದಾರೆ ಎಂದು ಈ ವೇಳೆ ಪ್ರಧಾನಿ ಮೋದಿ ನುಡಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Elon Musk : 'ಹಣದಿಂದ ಸಂತೋಷ ಖರೀದಿಸಲು ಸಾಧ್ಯವಿಲ್ಲ' 800 ಬಿಲಿಯನ್ ಡಾಲರ್ ಗಳಿಸಿದ ಶಾಕಿಂಗ್ ಪೋಸ್ಟ್!
Gadag Municipal Council ಗದಗ: ವರ್ಷ ಕಳೆದರೂ ಗದಗ ನಗರಸಭೆ ಸದಸ್ಯರಿಗೆ ಅಧಿಕಾರವಿಲ್ಲ!