ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ ಗುಜರಾತ್’ನ ಕೆಲ ಭಾಗಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಪರಶೀಲನೆ ನಡೆಸಿದ್ದು, ಪ್ರವಾಹದಲ್ಲಿ ಮೃತಪಟ್ಟ ಕುಟುಂಬದವರಿಗೆ ರೂ.2 ಲಕ್ಷ, ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಧನವನ್ನು ಘೋಷಿಸಿದ್ದಾರೆ.
ನವದೆಹಲಿ (ಜು.25): ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ ಗುಜರಾತ್’ನ ಕೆಲ ಭಾಗಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಪರಶೀಲನೆ ನಡೆಸಿದ್ದು, ಪ್ರವಾಹದಲ್ಲಿ ಮೃತಪಟ್ಟ ಕುಟುಂಬದವರಿಗೆ ರೂ.2 ಲಕ್ಷ, ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಧನವನ್ನು ಘೋಷಿಸಿದ್ದಾರೆ.
ಪ್ರವಾಹದಲ್ಲಿ ಮೃತಪಟ್ಟವರಿಗೆ ರೂ.2 ಲಕ್ಷ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ ಕೊಡುತ್ತೇನೆ. ಪ್ರವಾಹದಿಂದ ತತ್ತರಿಸಿರುವ ರೈತರ ಸಹಾಯಕ್ಕಾಗಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಸ್ಥಿತಿಯನ್ನು ಅವಲೋಕಿಸುವಾಗ ಗುಜರಾತ್ ಸರ್ಕಾರ ತ್ವರಿತವಾಗಿ ಪ್ರತಿಕ್ರಿಯಿಸುವುದು ಕಂಡು ಬಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಗುಜರಾತ್’ನಲ್ಲಿ ಭಾರೀ ಮಳೆ ಮತ್ತು ಪಕ್ಕದ ರಾಜಸ್ಥಾನದಲ್ಲಿ ಡ್ಯಾಂ ತೆರೆದಿದ್ದರಿಂದ ಪ್ರವಾಹ ಉಂಟಾಗಿ ಕೆಲವು ಹಳ್ಳಿಗಳು ಸಂಪೂರ್ಣ ಜಲಾವೃತಗೊಂಡಿವೆ. ಮಳೆಗಾಲ ಆರಂಭವಾದಾಗಿನಿಂದ ಇಲ್ಲಿಯವರೆಗೆ 82 ಮಂದಿ ಮೃತಪಟ್ಟಿದ್ದಾರೆ. ಸ