
ನವದೆಹಲಿ (ಡಿ.14): ಪ್ರಧಾನಿ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ತಾನೆಸಗಿದ ಹಗರಣಗಳು ಬಹಿರಂಗವಾಗುವ ಬಗ್ಗೆ ಮೋದಿ ಭಯಭೀತರಾಗಿದ್ದಾರೆ ಎಂದಿದ್ದಾರೆ.
ಪ್ರಧಾನಿ ಮೋದಿಯವರ ಮುಖವಾಡ ಕಳಚುವಂತಹ ಮಾಹಿತಿ ನನ್ನ ಬಳಿ ಇದೆ. ಲೋಕಸಭೆಯಲ್ಲಿ ನಾನದನ್ನು ಬಹಿರಂಗಪಡಿಸುತ್ತೇನೆಂದು ಅವರು ಭಯಭೀತರಾಗಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಚರ್ಚೆಗಾಗಿ ಪ್ರತಿಪಕ್ಷಗಳು ಸಿದ್ಧವಾಗಿವೆ ಎಂದು ಪುನರುಚ್ಛರಿಸಿರುವ ರಾಹುಲ್ ಗಾಂಧಿ, ಸರ್ಕಾರ ಚರ್ಚೆ ನಡೆಸಲು ಬಯಸುತ್ತಿಲ್ಲವೆಂದಿದ್ದಾರೆ.
ಅಧಿವೇಶನ ಆರಂಭವಾದ ದಿನದಿಂದಲೇ ಪ್ರತಿಪಕ್ಷಗಳು ನೋಟು ಅಮಾನ್ಯ ಕ್ರಮವನ್ನು ಚರ್ಚಿಸಲು ಬಯಸತ್ತಿವೆ. ಆದರೆ ಸರ್ಕಾರ ಅದಕ್ಕೆ ತಯಾರಿಲ್ಲ. ಪ್ರಧಾನಿ ಮೋದಿ ವೈಯುಕ್ತಿಕವಾಗಿ ನೋಟು ನಿಷೇಧ ಕ್ರಮವನ್ನು ಕೈಗೊಂಡಿರುವುದರಿಂದ ಅವರು ಖುದ್ದಾಗಿ ಬಂದು ವಿವರಣೆ ನೀಡಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಅನಂತ್ ಕುಮಾರ್ ತಿರುಗೇಟು:
ರಾಹುಲ್ ಗಾಂಧಿ ಹೇಳಿಕೆಯು ಹತಾಶೆಯ ಪ್ರತೀಕವೆಂದು ಕೇಂದ್ರ ಸಚಿವ ಅನಂತ್ ಕುಮಾರ್ ತಿರುಗೇಟು ನೀಡಿದ್ದಾರೆ.
ಜಗತ್ತಿನ ಮುಂದೆ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿಯವರ ಮುಖವಾಡ ಈಗಾಗಲೇ ಕಳಚಿಬಿದ್ದಿದೆ. ಈಗ ಹತಾಶೆಯಿಂದ ಅವರು ಏನೇನೋ ಹೇಳಿಕೆ ನೀಡುತ್ತಿದ್ದಾರೆ ಎಂದು ಅನಂತ್ ಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.