ಪಂಜಾಬ್ ಚುನಾವಣೆಯಲ್ಲಿ ಆಪ್ ಮನೆಗೆ: ಮೋದಿ ವಾಗ್ದಾಳಿ

Published : Jan 29, 2017, 11:52 AM ISTUpdated : Apr 11, 2018, 12:37 PM IST
ಪಂಜಾಬ್ ಚುನಾವಣೆಯಲ್ಲಿ ಆಪ್ ಮನೆಗೆ: ಮೋದಿ ವಾಗ್ದಾಳಿ

ಸಾರಾಂಶ

ಕಳೆದ ಒಂದು ವಾರದಿಂದ ಸತತವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆಗಳ ಸುರಿಮಳೆಗೈಯುತ್ತಿದ್ದ ಅರವಿಂದ್ ಕೇಜ್ರಿವಾಲ್’ಗೆ ನರೇಂದ್ರ ಮೋದಿ ಇಂದು ಪ್ರತ್ಯುತ್ತರ ನೀಡಿದ್ದಾರೆ. ಮುಂಬರಲಿರುವ ಚುನಾವಣೆಯಲ್ಲಿ ಪಂಜಾಬಿನ ಜನ ಆಮ್ ಆದ್ಮಿ ಪಕ್ಷವನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಟೀಕಿಸಿದ್ದಾರೆ.

ನವದೆಹಲಿ (ಜ.29): ಕಳೆದ ಒಂದು ವಾರದಿಂದ ಸತತವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕೆಗಳ ಸುರಿಮಳೆಗೈಯುತ್ತಿದ್ದ ಅರವಿಂದ್ ಕೇಜ್ರಿವಾಲ್’ಗೆ ನರೇಂದ್ರ ಮೋದಿ ಇಂದು ಪ್ರತ್ಯುತ್ತರ ನೀಡಿದ್ದಾರೆ. ಮುಂಬರಲಿರುವ ಚುನಾವಣೆಯಲ್ಲಿ ಪಂಜಾಬಿನ ಜನ ಆಮ್ ಆದ್ಮಿ ಪಕ್ಷವನ್ನು ಮನೆಗೆ ಕಳುಹಿಸಲಿದ್ದಾರೆ ಎಂದು ಟೀಕಿಸಿದ್ದಾರೆ.

ದೆಹಲಿಯಿಂದ ಪಂಜಾಬಿನ ಮಾರ್ಗ ಹಿಡಿದವರು ಮೊದಲು ದೆಹಲಿ ಜನರಿಗೆ ಮಾಡಿದ್ದ ಭರವಸೆಗಳನ್ನು ಪೂರೈಸಲಿ. ಶಿರೋಮಣಿ ಅಕಾಲಿ ದಳ-ಬಿಜೆಪಿ ಮೈತ್ರಿಯಲ್ಲಿ ಮುಖ್ಯಮಂತ್ರಿ ಸ್ಥಾನದ ಅಭ್ಯರ್ಥಿ ಪ್ರಕಾಶ್ ಸಿಂಗ್ ಬಾದಲ್ ಎದುರು ‘ಹೊರಗಿನವರು’ ನಿಲ್ಲಲು ಸಾಧ್ಯವಿಲ್ಲ ಎಂದು ಮೋದಿ ಗುಡುಗಿದ್ದಾರೆ.

ಪ್ರಕಾಶ್ ಸಿಂಗ್ ಬಾದಲ್ ಮೇಲಿರುವ ಭ್ರಷ್ಟಾಚಾರ ಆರೋಪವನ್ನು ತಳ್ಳಿ ಹಾಕಿದ ಮೋದಿ ಸರ್ಕಾರದ ಇಮೇಜನ್ನು ಹಾಳು ಮಾಡಲು ಉದ್ದೇಶಪೂರ್ವಕವಾಗಿ ಮಾಡಿದ ಕೆಲಸ ಇದು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಸು ಧ್ವನಿಯಲ್ಲಿ ಮಾತಾಡಿದ್ದರು ಎನ್ನುವ ಆರೋಪ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್