'ಬೆಳೆ ವಿಮೆ ಹೆಸರಲ್ಲಿ ಕೇಂದ್ರದಿಂದ ರೈತರ ಲೂಟಿ'

Published : Nov 06, 2018, 04:06 PM IST
'ಬೆಳೆ ವಿಮೆ ಹೆಸರಲ್ಲಿ ಕೇಂದ್ರದಿಂದ ರೈತರ ಲೂಟಿ'

ಸಾರಾಂಶ

ರಫೇಲ್ ಬಳಿಕ ಇದೀಗ ಬೆಳೆ ವಿಮೆ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೈತರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ನವದೆಹಲಿ :  ರಫೇಲ್ ಯುದ್ಧ ವಿಮಾನದ ಮೂಲಕ ಲೂಟಿ ಮಾಡಿದ ಬಳಿಕ ಇದೀಗ ಬೆಳೆ ವಿಮೆ ಮೂಲಕ ಇದೀಗ ಪ್ರಧಾನಿ ನರೇಂದ್ರ ಮೋದಿ ರೈತರನ್ನು  ಲೂಟಿ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ತಮ್ಮ ಗೆಳೆಯರ ಜೊತೆ ಸೇರಿಕೊಂಡು ಇಂತಹ ಕೆಲಸ ಮಾಡುತ್ತಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ. 

ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ಅವರು ಸೂಟ್ ಬೂಟ್ ಗೆಳೆಯರ ಖಾತೆಗಳನ್ನು ಸಾವಿರಾರು ಕೋಟಿ ರು.ಗಳಿಂದ ತುಂಬುತ್ತಿದ್ದಾರೆ ಎಂದಿದ್ದಾರೆ. 

ಆದರೆ ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.  ರಪೇಲ್ ಹೆಸರಿನಲ್ಲಿ ಏರ್ ಫೋರ್ಸ್ ಲೂಟಿ ಮಾಡಿದ್ದು, ಇದೀಗ ಬೆಳೆ ಸಾಲದ ಹೆಸರಿನಲ್ಲಿ ರೈತರನ್ನು ಲೂಟಿ ಮಾಡುತ್ತಿದ್ದಾರೆ.  ಗೆಳೆಯರ ಖಾತೆ ತುಂಬಿಸಲು ಬೇರೆಯವರ ಲೂಟಿ ನಡೆಯುತ್ತಿದೆ ಸರ್ಕಾರ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2025 ಸಾರ್ಥಕ ವರ್ಷ: ಮನ್‌ ಕಿ ಬಾತ್‌ನಲ್ಲಿ ಮೋದಿ
ವಿದೇಶದಲ್ಲಿ ಪಾಸ್‌ಪೋರ್ಟ್ ಕಳೆದುಹೋದರೆ ತಕ್ಷಣ ಮಾಡಬೇಕಾದ ಕೆಲಸವಿದು, ತಿಳ್ಕೊಳ್ಳಿ!