
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಈ ವರ್ಷದ ಮೊದಲ ಮನ್ ಕಿ ಬಾತ್ ಕಾರ್ಯಕ್ರಮವನ್ನು ಇಂದು ನಡೆಸಿದ್ದಾರೆ. ಈ ವೇಳೆ ಮೈಸೂರಿನ ದರ್ಶನ್ ಎಂಬ ಯುವಕನ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.
ಜನೌಷಧಿ ಕೇಂದ್ರದ ಬಗ್ಗೆ ದರ್ಶನ್ ಅನುಭವವನ್ನು ಪ್ರಧಾನಿ ಮೋದಿ ಅವರು ತಮ್ಮ ಮನದ ಮಾತು ಕಾರ್ಯಕ್ರಮದಲ್ಲಿ ಹಂಚಿಕೊಂಡಿದ್ದಾರೆ.
ತಿಂಗಳಿಗೆ ತಂದೆಯ ಔಷಧಿಗಾಗಿ 6 ಸಾವಿರ ರೂ. ಖರ್ಚು ಮಾಡುತ್ತಿದ್ದ ದರ್ಶನ್ ಈಗ ಜನೌಷಧಿ ಕೇಂದ್ರದಿಂದ ಖರೀದಿಸಿ ಶೇ.75ರಷ್ಟು ಹಣ ಉಳಿತಾಯ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಅಲ್ಲದೇ ಜನೌಷಧಿ ಕೇಂದ್ರದ ಲಾಭದ ಬಗ್ಗೆಯೂ ಕೂಡ ಮನ್ ಕೀ ಬಾತ್ನಲ್ಲಿ ಪ್ರಸ್ತಾಪಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.