
ಕೇದಾರನಾಥ(ಮೇ.18): ಇಡೀ ದೇಶ ಲೋಕಸಭೆ ಚುನಾವಣೆಯ ಫಲಿತಾಂಶದ ದಿನಕ್ಕಾಗಿ ಕಾತರದಿಂದ ಕಾಯುತ್ತಿದೆ. ಫಲಿತಾಂಶದ ಬಳಿಕ ಏನಾಗಲಿದೆ ಎಂಬ ಕುತೂಹಲ ಎಲ್ಲಾ ರಾಜಕೀಯ ಪಕ್ಷಗಳಿಂದ ಹಿಡಿದು ಜನಸಾಮಾನ್ಯರಲ್ಲಿಯೂ ಇದೆ.
"
ಆದರೆ ಲೋಕಸಭೆ ಚುನಾವಣೆಗಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿರುವ ಪ್ರಧಾನಿ ಮೋದಿ, ಕೇದಾರನಾಥ್ ಸನ್ನಿಧಿಯಲ್ಲಿ ಧ್ಯಾನದಲ್ಲಿ ನಿರತರಾಗುವ ಮೂಲಕ ತಮ್ಮ ಬಳಲಿಕೆಯನ್ನು ದೂರ ಮಾಡಿದ್ದಾರೆ.
ಇಂದು ಕೇದಾರನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, ದೇಗುಲದಿಂದ ದೂರವಿರುವ ಗುಹೆಯಲ್ಲಿ ಕುಳಿತು ಧ್ಯಾನ ಮಾಡಿದ್ದಾರೆ.
ಇದಕ್ಕೂ ಮೊದಲು ಕೇದಾರನಾಥ್ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಮೋದಿ, ಬಳಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಧ್ಯಾನ ಮಾಡಲು ಗುಹೆಯತ್ತ ತೆರಳಿದರು.
2019 ರ ಲೋಕಸಭಾ ಚುನಾವಣೆಗೆ ಬಹಿರಂಗ ಪ್ರಚಾರ ಅಂತ್ಯಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಕೇದಾರನಾಥ-ಬದ್ರಿನಾಥ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಗುಜರಾತ್ ನಲ್ಲಿರುವ ಸೋಮನಾಥ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.