
ಚೆನ್ನೈ(ಡಿ.06): ತಮಿಳುನಾಡು ಸಿಎಂ ಜಯಲಲಿತಾ, ತಮಿಳುನಾಡಿನ 'ಅಮ್ಮ' ಬಾರದ ಲೋಕಕ್ಕೆ ಪಯಣಿಸಿದ್ದಾರೆ. ಇವರ ಅಂತಿಮ ದರ್ಶನ ಪಡೆಯಲು ಜನಸ್ತೋಮವೇ ಹರಿದು ಬರುತ್ತಿದೆ. ಸಿನಿಮಾ, ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದ ಜಯಲಲಿತಾ ಅಂತಿಮ ದರ್ಶನಕ್ಕೆ ಗಣ್ಯಾತಿಗಣ್ಯರು ಆಗಮಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ತಮಿಳುನಾಡಿನ ರಾಜಕೀಯದಲ್ಲಿ ತನ್ನ ಅಳಿಯದ ಛಾಪು ಮೂಡಿಸಿದ್ದ ಜಯಾ ಅಂತಿಮ ದರ್ಶನಕ್ಕೆ ಪ್ರಧಾನಿ ಮೋದಿಯೂ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಆಗಮಿಸಿರುವ ನರೇಂದ್ರ ಮೋದಿ ಜಯಲಲಿತಾ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಈ ವೇಳೆ ಭಾವುಕರಾದ ಪ್ರಧಾನಿ ಜಯಲಲಿತಾರನ್ನು ನೆನೆದು ಕಣ್ಣೀರಿಟ್ಟಿದ್ದಾರೆ.
ಪ್ರಧಾನಿ ಮೋದಿ ವಾಯುನೆಲೆಯಿಂದ ರಾಜಾಜಿ ಹಾಲ್'ಗೆ ಕೆಂಪು ದೀಪ ಹಾಗೂ ರಾಷ್ಟ್ರ ಧ್ವಜವಿಲ್ಲದ ಕಾರಿನಲ್ಲಿ ತೆರಳಿದ್ದು ವಿಶೇಷವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.