
ನವದೆಹಲಿ: ದೇಶವು ಈ ಬಾರಿ 70ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ದೇಶಾದ್ಯಂತ ಈ ದಿನವನ್ನು ಅದ್ದೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ.
ಸ್ವಾತಂತ್ರ್ಯೋತ್ಸವ ಆಚರಣೆ ಬಗ್ಗೆ ಇಂದು ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪ್ರಧಾನಿ ಮೋದಿ ಸಂಸದರೊಂದಿಗೆ ಚರ್ಚಿಸಿದ್ದಾರೆ.
ದೇಶದಾದ್ಯಂತ ಆ.9ರಿಂದಲೇ ಸ್ವಾತಂತ್ರ್ಯೋತ್ಸವ ಅಚರಣೆಗಳು ಆರಂಭಗೊಳ್ಳುವುದು. ಆ. 15ರ ಬಳಿಕ ದೇಶದಾದ್ಯಂತ ‘ಸಂಕಲ್ಪ ಯಾತ್ರೆ’ಯನ್ನು ಹಮ್ಮಿಕೊಳ್ಳಲಾಗುವುದು. ಪ್ರತಿಯೊಬ್ಬ ಪ್ರಜೆ ಹಾಗೂ ದೇಶದ ಅಭಿವೃದ್ಧಿಗಾಗಿ ಈ ಯಾತ್ರೆಯಲ್ಲಿ ಸಂಕಲ್ಪಗೈಯಲಾಗುವುದು, ಎಂದು ಸಂಸದೀಯ ವ್ಯವಹಾರ ಇಲಾಖೆ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
1947ರಿಂದ ಆರಂಭಿಸಿ ಭಾರತವು ಬಹಳಷ್ಟು ಸಾಧಿಸಿದೆ; 2022ರ ವೇಳೆಗೆ ನಾವು ಜಾಗತಿಕ ಶಕ್ತಿಯಾಗಿ ರೂಪುಗೊಳ್ಳುವೆವು ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದ್ದಾರೆ, ಎಂದು ಅನಂತ್ ಕುಮಾರ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.