
ನವದೆಹಲಿ: ಮುಸ್ಲಿಮರ ಪವಿತ್ರ ತಿಂಗಳು ರಂಜಾನ್ ಆರಂಭದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.
‘ಭಾರತದಲ್ಲಿ ಆಸ್ತಿಕರು ಮತ್ತು ನಾಸ್ತಿಕರು ಹೇಗಿದ್ದಾರೋ, ಹಾಗೇ ಮೂರ್ತಿ ಆರಾಧಕರು ಮತ್ತು ಮೂರ್ತಿ ಆರಾಧನೆ ಮಾಡದವರು ಜೊತೆಯಾಗಿ ಶಾಂತಿಯುತ ಜೀವನ ನಡೆಸುತ್ತಿದ್ದಾರೆ' ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
‘ಅಂತಿಮವಾಗಿ ಎಲ್ಲ ಧರ್ಮ, ನಂಬಿಕೆ, ಸಿದ್ಧಾಂತ ಮತ್ತು ಸಂಪ್ರದಾಯಗಳು ಶಾಂತಿ, ಏಕತೆ ಮತ್ತು ಸೌಹಾರ್ದತೆಯ ಸಂದೇಶ ನೀಡಿವೆ' ಎಂದು ಮೋದಿ ಟ್ವೀಟ್ ಹಾಗೂ ರೇಡಿಯೋ ಭಾಷಣದಲ್ಲಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.