‘ನೀವೆಷ್ಟು, ನಾವೆಷ್ಟು ಮರೆಯೋಣ: ಸದನದ ಘನತೆ ಮೆರೆಯೋಣ’!

Published : Jun 17, 2019, 12:25 PM IST
‘ನೀವೆಷ್ಟು, ನಾವೆಷ್ಟು ಮರೆಯೋಣ: ಸದನದ ಘನತೆ ಮೆರೆಯೋಣ’!

ಸಾರಾಂಶ

ಇಂದಿನಿಂದ 17ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ| ಅಧಿವೇಶನ ಆರಂಭಿಸಲು ಮೋದಿ 2.0 ಸರ್ಕಾರ ಸಜ್ಜು| ಕಲಾಪದಲ್ಲಿ ಸಕ್ರೀಯವಾಗಿ ಭಾಗವಹಿಸಲು ವಿಪಕ್ಷಗಳಿಗೆ ಮೋದಿ ಮನವಿ| ಸಂಖ್ಯಾಬಲ ಮರೆತು ಕಲಾಪದಲ್ಲಿ ಭಾಗವಹಿಸುವಂತೆ ಕರೆ| ಸಕ್ರೀಯ ವಿರೋಧ ಪಕ್ಷದ ಅಗತ್ಯತೆ ಒತ್ತಿ ಹೇಳಿದ ಪ್ರಧಾನಿ| 

ನವದೆಹಲಿ(ಜೂ.17): 17ನೇ ಲೋಕಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಎಲ್ಲಾ ಸದಸ್ಯರಿಗೆ ಮನವಿ ಮಾಡಿದ್ದಾರೆ.

ಕಲಾಪ ಆರಂಭಕ್ಕೂ ಮುನ್ನ ಮಾತನಾಡಿದ ಪ್ರಧಾನಿ ಮೋದಿ, ಸಂಸತ್ತಿನಲ್ಲಿ ಸಕ್ರೀಯ ವಿರೋಧ ಪಕ್ಷದ ಅಗತ್ಯತೆಯನ್ನು ಒತ್ತಿ ಹೇಳಿದರು. ವಿರೋಧ ಪಕ್ಷಗಳು ತಮ್ಮ ಸಂಖ್ಯಾಬಲದ ಕುರಿತು ಆತಂಕಪಡದೇ, ಕಲಾಪದಲ್ಲಿ ಸಕ್ರೀಯವಾಗಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ಮೋದಿ ಮನವಿ ಮಾಡಿದರು. 

ವಿರೋಧಪಕ್ಷಗಳು ತಮ್ಮ ಸಂಖ್ಯೆಯ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯತೆಯಿಲ್ಲ. ಸದನ ಕಲಾಪ ವೇಳೆ ವಿರೋಧ ಪಕ್ಷಗಳು ಸಕ್ರಿಯವಾಗಿ ಭಾಗವಹಿಸುತ್ತವೆ ಎಂದು ತಾವು ಆಶಿಸುವುದಾಗಿ ಪ್ರಧಾನಿ ನುಡಿದರು. 

ಸಂಸತ್ತಿನ ಮೊದಲ ಅಧಿವೇಶನ ಇಂದಿನಿಂದ ಜುಲೈ 26ರವರೆಗೆ ನಡೆಯಲಿದ್ದು, ಮೊದಲೆರಡು ದಿನ ನೂತನವಾಗಿ ಆಯ್ಕೆಯಾಗಿರುವ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜುಲೈ 5ರಂದು ಬಜೆಟ್ ಮಂಡನೆಯಾಗಲಿದೆ.

ಈಗಾಗಲೇ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ
ಅಧಿವೇಶನದ ಮೊದಲ ದಿನವೇ ಕೇಬಲ್‌ ಆಪರೇಟರ್‌ಗಳಿಗೆ ಸಿಹಿಸುದ್ದಿ ನೀಡಿದ ಇಂಧನ ಸಚಿವ ಕೆಜೆ ಜಾರ್ಜ್‌!