
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ರಾಷ್ಟ್ರ ಹಾಗೂ ಬಿಹಾರ ರಾಜಕಾರಣದಕಲ್ಲಿ ಸಂಚಲನವನ್ನೇ ಮೂಡಿಸಿದೆ. ನಿತೀಶ್ ರಾಜೀನಾಮೆನೀಡಿರುವ ಕ್ರಮವನ್ನು ಪ್ರಧಾನಿ ಮೋದಿ ಪ್ರಶಂಸಿಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ಜೊತೆಯಾಗಿದ್ದಕ್ಕೆ ನಿತೀಶ್ ಅವರಿಗೆ ಅಭಿನಂದನೆಗಳು. 125 ಕೋಟಿ ಪ್ರಜೆಗಳು ಈ ಪ್ರಾಮಾಣಿಕತೆಯನ್ನು ಸ್ವಾಗತಿಸುತ್ತಿದ್ದಾರೆ ಹಾಗೂ ಬೆಂಬಲಿಸುತ್ತಾರೆ ಎಂದು ಮೋದಿ ಟ್ವೀಟಿಸಿದ್ದಾರೆ.
ದೇಶ, ವಿಶೇಷವಾಗಿ ಬಿಹಾರದ ಉಜ್ವಲ ಭವಿಷ್ಯಕ್ಕಾಗಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಭ್ರಷ್ಟಾಚಾರದ ವಿರುದ್ಧ ಒಂದಾಗಿ ಹೋರಾಡುವ ಅಗತ್ಯವಿದೆ. ಇದು ದೇಶ ಹಾಗೂ ಸಮಯದ ಬೇಡಿಕೆಯೂ ಆಗಿದೆ ಎಂದು ಮೋದಿ ಹೆಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.