ಇವಿಎಂ ದೂರುವುದು ಹೊಸ ಕಾಯಿಲೆ: ವಿಪಕ್ಷಗಳ ಕಾಲೆಳೆದ ಮೋದಿ!

Published : Jun 26, 2019, 05:07 PM ISTUpdated : Jun 26, 2019, 05:51 PM IST
ಇವಿಎಂ ದೂರುವುದು ಹೊಸ ಕಾಯಿಲೆ: ವಿಪಕ್ಷಗಳ ಕಾಲೆಳೆದ ಮೋದಿ!

ಸಾರಾಂಶ

‘ಚುನಾವಣೆ ಸೋಲಿಗೆ ಇವಿಎಂ ದೂರುವುದು ಹೊಸ ಕಾಯಿಲೆ’| ರಾಜ್ಯಸಭೆಯಲ್ಲಿ ವಿಪಕ್ಷಗಳ ಬೆವರಿಳಿಸಿದ ಪ್ರಧಾನಿ ಮೋದಿ| ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯ| ಬಿಜೆಪಿ ಗೆಲುವಿಗೆ ಇವಿಎಂ ಕಾರಣ ಎನ್ನುತ್ತಿವೆ ವಿಪಕ್ಷಗಳು| ಚುನಾವಣೆ ಪ್ರಕ್ರಿಯೆಯಲ್ಲಿ ಆದ ಸುಧಾರಣೆಗಳನ್ನು ಶ್ಲಾಘಿಸಿದ ಪ್ರಧಾನಿ|

ನವದೆಹಲಿ(ಜೂ.26): ಚುನಾವಣೆ ಸೋಲನ್ನು ಒಪ್ಪಿಕೊಳ್ಳದ ಮನಸ್ಸುಗಳು ಇವಿಎಂ ಮಶೀನ್’ಗಳನ್ನು ದೂರುವುದನ್ನೇ ಕಾಯಕ ಮಾಡಿಕೊಂಡಿವೆ ಎಂದು ಪ್ರಧಾನಿ ಮೋದಿ ವಿಪಕ್ಷಗಳನ್ನು ಚುಚ್ಚಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ ಮೋದಿ, ಬಿಜೆಪಿಯ ಚುನಾವಣೆ ಗೆಲುವಿಗೆ ಇವಿಎಂ ದೂರುವುದು ಒಂದು ಹೊಸ ಕಾಯಿಲೆ ಎಂದು ಕುಹುಕವಾಡಿದರು.

ಹಿಂದೆ ಬಿಜೆಪಿ ಸದನದಲ್ಲಿ ಕೇವಲ ಎರಡು ಸದಸ್ಯರನ್ನು ಹೊಂದಿತ್ತು. ಆಗಲೂ ನಮ್ಮನ್ನು ಕುಹುಕವಾಡುತ್ತಿದ್ದ ಕೆಲವರು, ಇಂದು ಬಿಜೆಪಿಯ ಅಗಾಧ ಶಕ್ತಿ ಕಂಡು ಇವಿಎಂ ನ್ನು ದೂರುತ್ತಿದ್ದಾರೆ ಎಂದು ಮೋದಿ ಕಾಂಗ್ರೆಸ್’ಗೆ ತಿರುಗೇಟು ನೀಡಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ಆಗಿರುವ ಸುಧಾರಣೆಗಳು ನಿಜಕ್ಕೂ ಶ್ಲಾಘನೀಯ ಎಂದ ಮೋದಿ, ತಂತ್ರಜ್ಞಾನದ ಬೆಳವಣಿಗೆಯಿಂದ ಮತದಾನ ಶಾಂತಿಯುತವಾಗಿ ಮತ್ತು ಸುರಕ್ಷಿತವಾಗಿ ನಡೆಯುತ್ತಿರುವುದು ಆರೋಗ್ಯಕರ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!