
ಕೊಲಂಬೋ(ಜೂ.09): ಅನಿವಾಸಿ ಭಾರತೀಯರ ಪರಿಶ್ರಮದಿಂದಾಗಿ ವಿಶ್ವಮಟ್ಟದಲ್ಲಿ ಭಾರತದ ಸ್ಥಾನ ಸುಭದ್ರವಾಗಿದೆ ಎಂದು ಪ್ರಧಾನಿ ನೆರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, ಕೋಲಂಬೋದ ಇಂಡಿಯಾ ಹೌಸ್ ನಲ್ಲಿ ಅನಿವಾಸಿ ಭಾರತೀಯರನ್ನುದ್ದೇಶಿಸಿ ಮಾತನಾಡಿದರು.
ಸಾಗರೋತ್ತರ ಭಾರತೀಯ ಸಮುದಾಯ ಹಾಗೂ ಭಾರತ ಸರ್ಕಾರದ ದೃಷ್ಟಿಕೋನ ಒಂದೇ ರೀತಿಯಲ್ಲಿರುವುದು ತಮಗೆ ಅತೀವ ಸಂತೋಷ ತಂದಿದೆ ಎಂದು ಈ ವೇಳೆ ಮೋದಿ ಹೇಳಿದರು.
ವಿಶ್ವಮಟ್ಟದಲ್ಲಿ ಭಾರತದ ಸ್ಥಾನಮಾನ ಹೆಚ್ಚಾಗಿರುವುದಕ್ಕೆ ಅನಿವಾಸಿ ಭಾರತೀಯರ ಕೊಡುಗೆ ಅಪಾರ. ತಾವು ವಿಶ್ವದ ಯಾವುದೇ ರಾಷ್ಟ್ರಕ್ಕೆ ಭೇಟಿ ನೀಡಿದರೂ ಅಲ್ಲಿ ಭಾರತೀಯರದ್ದೇ ಗುಣಗಾನ ಕೇಳುತ್ತೇನೆ ಎಂದು ಮೋದಿ ಹೆಮ್ಮೆ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.