ವಾರಣಾಸಿಯಷ್ಟೇ ಕೇರಳವನ್ನು ಪ್ರೀತಿಸುವೆ: ಮೋದಿ!

Published : Jun 08, 2019, 05:44 PM ISTUpdated : Jun 08, 2019, 05:45 PM IST
ವಾರಣಾಸಿಯಷ್ಟೇ ಕೇರಳವನ್ನು ಪ್ರೀತಿಸುವೆ: ಮೋದಿ!

ಸಾರಾಂಶ

ಕೇರಳ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ| ಗುರುವಾಯೂರು ದೇವಸ್ಥಾನದಲ್ಲಿ ಹೂವಿನ ತುಲಾಭಾರ| ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಮೋದಿ| ಸ್ವಕ್ಷೇತ್ರ ವಾರಣಾಸಿಯಷ್ಟೇ ಕೇರಳವನ್ನೂ ಪ್ರೀತಿಸುವುದಾಗಿ ಹೇಳಿದ ಪ್ರಧಾನಿ| 5 ವರ್ಷಗಳ ಕಾಲ ಜನತೆಯ ಸೇವಕನಾಗಿ ಕೆಲಸ ಮಾಡುತ್ತೇನೆ ಎಂದ ಪ್ರಧಾನಿ|

ಗುರುವಾಯೂರು (ಜೂ.08): ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇರಳಕ್ಕೆ ಆಗಮಿಸಿರುವ ಪ್ರಧಾನಿ ಮೋದಿ, ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಇಂದು ಬೆಳಗ್ಗೆ ಕೇರಳದ ಗುರುವಾಯೂರು ದೇಗುಲಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ದೇವಾಲಯದಲ್ಲಿ ಕಮಲದ ಹೂವಿನ ತುಲಾಭಾರ ಸೇವೆಯಲ್ಲಿ ಭಾಗಿಯಾದರು. 

ವಿಶೇಷ ಪೂಜೆ ಬಳಿಕ ಕೇರಳ ಬಿಜೆಪಿ ರಾಜ್ಯ ಘಟಕ ಏರ್ಪಡಿಸಿದ್ದ ಅಭಿನಂದನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮೋದಿ, ತಮ್ಮ ಸ್ವಕ್ಷೇತ್ರ ವಾರಣಾಸಿಯಷ್ಟೇ ಕೇರಳವನ್ನೂ ಪ್ರೀತಿಸುವುದಾಗಿ ಹೇಳಿದರು.

ಉಡುಪಿ, ಗುರುವಾಯೂರು ಹಾಗೂ ದ್ವಾರಕಾದೊಂದಿಗೆ ಗುಜರಾತ್ ಜನತೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ.  ದ್ವಾರಕಾದೀಶ ಮತ್ತು ಕೃಷ್ಣನೊಂದಿಗೆ ಗುಜರಾತ್ ಜನತೆ ಧಾರ್ಮಿಕ ಮತ್ತು ಭಾವನಾತ್ಮಕ ಸಂಬಂಧ ಹೊಂದಿದ್ದಾರೆ ಎಂದು ಮೋದಿ ನುಡಿದರು.

ಚುನಾವಣೆಯಲ್ಲಿ ಬಿಜೆಪಿಯನ್ನು ಜನತೆ ಸೇವೆ ಮಾಡಲು ಆರಿಸಿದ್ದು, ಮುಂದಿನ 5 ವರ್ಷಗಳ ಕಾಲ ತಾವು ಜನತೆಯ ಸೇವಕರಾಗಿ ಕೆಲಸ ಮಾಡುವುದಾಗಿ ಪ್ರಧಾನಿ ಹೇಳಿದರು.

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಫ್ರೀಡಂ ಪಾರ್ಕ್‌ನಲ್ಲಿ ಕೈಗೆ ಕೋಳ ಹಾಕಿಕೊಂಡು 'STOP killing Men' ಪ್ರತಿಭಟನೆ ಮಾಡಿದ ಪುರುಷರು!
ಅಫೀಸ್‌ ಸಮಯ ಬಳಿಕ ಕರೆ-ಇಮೇಲ್ ಮಾಡಂಗಿಲ್ಲ, ಡಿಸ್‌ಕನೆಕ್ಟ್ ಬಿಲ್ ಲೋಕಸಭೆಯಲ್ಲಿ ಮಂಡನೆ