ತ್ರಿವಳಿ ತಲಾಖ್ ಐತಿಹಾಸಿಕ ತೀರ್ಪು; ಯಾರ್ಯಾರು ಏನೇನು ಹೇಳಿದ್ರು ಇಲ್ಲಿದೆ ನೋಡಿ

Published : Aug 22, 2017, 04:29 PM ISTUpdated : Apr 11, 2018, 12:46 PM IST
ತ್ರಿವಳಿ ತಲಾಖ್ ಐತಿಹಾಸಿಕ ತೀರ್ಪು; ಯಾರ್ಯಾರು ಏನೇನು ಹೇಳಿದ್ರು ಇಲ್ಲಿದೆ ನೋಡಿ

ಸಾರಾಂಶ

ತ್ರಿವಳಿ ತಲಾಖನ್ನು ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ನೀಡಿದ ಐತಿಹಾಸಿಕ ಮಹತ್ವಪೂರ್ಣ ತೀರ್ಪನ್ನು ಅನೇಕರು ಸ್ವಾಗತಿಸಿದ್ದಾರೆ.

ನವದೆಹಲಿ (ಆ.22): ತ್ರಿವಳಿ ತಲಾಖನ್ನು ಅಸಾಂವಿಧಾನಿಕ ಎಂದು ಸುಪ್ರೀಂಕೋರ್ಟ್ ನೀಡಿದ ಐತಿಹಾಸಿಕ ಮಹತ್ವಪೂರ್ಣ ತೀರ್ಪನ್ನು ಅನೇಕರು ಸ್ವಾಗತಿಸಿದ್ದಾರೆ.

ಪ್ರಧಾನಿ ನರೇಂದ್ರ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ಇದೊಂದು ಐತಿಹಾಸಿಕ ತೀರ್ಪಾಗಿದೆ. ಮುಸಲ್ಮಾನ ಮಹಿಳೆಯರಿಗೆ ಪುರುಷರಷ್ಟೇ ಸಮಾನವಾದ ಸಮಾನತೆಯನ್ನು ನೀಡಲಿದ್ದು, ಮಹಿಳಾ ಸಬಲೀಕರಣಕ್ಕೆ ಇನ್ನಷ್ಟು ಬಲ ತುಂಬುತ್ತದೆ ಎಂದು ಮೋದಿ ಟ್ವೀಟಿಸಿದ್ದಾರೆ.

 

ನಾವು ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದರ ಮೂಲಕ ಮುಸಲ್ಮಾನ ಮಹಿಳೆಯರು ನ್ಯಾಯವನ್ನು ಪಡೆದಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಬಿಎಸ್ಪಿ ಕೂಡಾ ತೀರ್ಪನ್ನು ಸ್ವಾಗತಿಸುತ್ತದೆ ಎಂದು ಮಾಯಾವತಿ ಹೇಳಿದ್ದಾರೆ.

ಇದು ಸಾಂವಿಧಾನಿಕ ಮೌಲ್ಯಗಳಿಗೆ ಸಿಕ್ಕ ಗೆಲುವಾಗಿದೆ ಎಂದು ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಹೇಳಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪನ್ನು ನಾವು ಗೌರವಿಸಬೇಕು. ಇದನ್ನು ವಾಸ್ತವವಾಗಿ ಜಾರಿಗೊಳಿಸುವುದು ಕಷ್ಟಸಾಧ್ಯವಾಗಿದೆ ಎಂದು ಅಸಾವುದ್ದೀನ್ ಓವೈಸಿ ಹೇಳಿದ್ದಾರೆ.

ಕಾಂಗ್ರೆಸ್ ಕೂಡಾ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌