ಕಾವೇರಿ ನಿರ್ವಹಣಾ ಮಂಡಳಿ ಬಗ್ಗೆ ಮೋದಿ ಮೌನ

By Suvarna Web DeskFirst Published Feb 25, 2018, 6:09 PM IST
Highlights

ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಕುರಿತಂತೆ ತಮಿಳುನಾಡಿನ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿದ್ದಾರೆ.

ಚೆನ್ನೈ: ಸುಪ್ರೀಂಕೋರ್ಟ್ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವ ಕುರಿತಂತೆ ತಮಿಳುನಾಡಿನ ಬೇಡಿಕೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿದ್ದಾರೆ.

ಶನಿವಾರ ಇಲ್ಲಿ ಮಾಜಿ ಸಿಎಂ ಜಯಲಲಿತಾ ಅವರ ಜನ್ಮದಿನದ ನಿಮಿತ್ತ ಸಬ್ಸಿಡಿ ಸ್ಕೂಟರ್ ಯೋಜನೆಗೆ ಮೋದಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ತಮಿಳುನಾಡು ಮುಖ್ಯ ಮಂತ್ರಿ ಕೆ. ಪಳನಿಸ್ವಾಮಿ ಹಾಗೂ ಡಿಸಿಎಂ ಒ. ಪನ್ನೀರಸೆಲ್ವಂ , ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣಾ ಸಮಿತಿ ರಚನೆಗೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ವೇದಿಕೆಯಲ್ಲಿದ್ದ ಮೋದಿ ಅವರನ್ನು ಆಗ್ರಹಿಸಿದರು.

ಆದರೆ, ಬಳಿಕ ಮಾತನಾಡಿದ ಮೋದಿ, ಒಮ್ಮೆಯೂ ಕಾವೇರಿ ನಿಯಂತ್ರಣ ಮಂಡಳಿ ರಚನೆಯ ಬಗ್ಗೆ ಪ್ರಸ್ತಾಪಿಸಲಿಲ್ಲ.

click me!