ಬನ್ರಿ ಮಾತಾಡೋಣ: ಸಿಬಿಐ ಟಾಪ್ ಅಧಿಕಾರಿಗಳಿಗೆ ಮೋದಿ ಬುಲಾವ್!

Published : Oct 23, 2018, 11:28 AM IST
ಬನ್ರಿ ಮಾತಾಡೋಣ: ಸಿಬಿಐ ಟಾಪ್ ಅಧಿಕಾರಿಗಳಿಗೆ ಮೋದಿ ಬುಲಾವ್!

ಸಾರಾಂಶ

ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿನ ಆಂತರಿಕ ಸಂಘರ್ಷ! ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಸಿಬಿಐ ಲಂಚ ಹಗರಣ! ಸಿಬಿಐ ಟಾಪ್ ಅಧಿಕಾರಿಗಳನ್ನು ಮಾತುಕತೆಗೆ ಆಹ್ವಾನಿಸಿದ ಮೋದಿ! ಅಲೋಕ್ ವರ್ಮಾ, ರಾಜೇಶ್ ಆಸ್ಥಾನಾಗೆ ಪ್ರಧಾನಿ ಬುಲಾವ್! ಮೊಯಿನ್ ಖುರೇಷಿ ಪ್ರಕರಣದಲ್ಲಿ ಲಂಚ ಸ್ವೀಕರಿಸಿದ ಆರೋಪ

ನವದೆಹಲಿ(ಅ.23): ದೇಶದ ಅತ್ಯುನ್ನತ ತನಿಖಾ ಸಂಸ್ಥೆಯಲ್ಲಿನ ಆಂತರಿಕ ಸಂಘರ್ಷ ಹೊಸ ತಿರುವು ಪಡೆದುಕೊಂಡಿದ್ದು, ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮತ್ತು ನಂ.2 ಸ್ಥಾನದಲ್ಲಿರುವ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಬುಲಾವ್ ನೀಡಿದ್ದಾರೆ.

ಎರಡು ಕೋಟಿ ರೂ. ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನಾ ಅವರ ವಿರುದ್ಧವೇ ಎಫ್ಐಆರ್ ದಾಖಲಿಸಿದೆ. ಅಲ್ಲದೆ ರಾ ಸಂಸ್ಥೆಯ ನಂ.2 ಸ್ಥಾನದಲ್ಲಿರುವ ಸಮಂತ್ ಕುಮಾರ್ ಗೋಯಲ್ ಅವರ ಹೆಸರನ್ನೂ ಎಫ್ಐಆರ್ ನಲ್ಲಿ ಉಲ್ಲೇಖಿಸಿದೆ. ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಸಿಬಿಐ ಉಪ ಪೊಲೀಸ್ ಅಧೀಕ್ಷಕ ದೇವೇಂದರ್ ಕುಮಾರ್ ಅವರನ್ನು ಸಿಬಿಐ ಅಧಿಕಾರಿಗಳು ಈಗಾಗಲೇ ಬಂಧಿಸಿದ್ದಾರೆ.

ವಿವಾದಾತ್ಮಕ ಮಾಂಸ ರಫ್ತುದಾರ ಮೊಯಿನ್ ಖುರೇಷಿ ಪ್ರಕರಣದಲ್ಲಿ ತನಿಖಾಧಿಕಾರಿಯಾಗಿದ್ದ ದೇವೇಂದರ್ ಕುಮಾರ್ ಅವರನ್ನು, ಪ್ರಕರಣದ ಮತ್ತೊಬ್ಬ ಆರೋಪಿ ಸತೀಶ್ ಸನಾಗೆ ಕ್ಲೀನ್ ಚಿಟ್ ನೀಡಲು ಲಂಚ ಪಡೆದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಸ್ಥಾನಾ ನೇತೃತ್ವದ ಸಿಬಿಐ ತಂಡ ಸೆಪ್ಟೆಂಬರ್ 26, 2018ರಂದು ಸತೀಶ್ ಸನಾಗೆ ಕ್ಲೀನ್ ಚಿಟ್ ನೀಡಲು ಆರೋಪಿಯಿಂದ ನಕಲಿ ಹೇಳಿಕೆ ಪಡೆದಿದ್ದಾರೆ. ಆದರೆ ಆ ದಿನ ಆರೋಪಿ ಉದ್ಯಮಿ ಹೈದರಾಬಾದ್ ನಲ್ಲಿದ್ದರು ಎಂಬುದು ಸಿಬಿಐ ತನಿಖೆ ವೇಳೆ ಬಹಿರಂಗವಾಗಿದೆ.

ದೇವೇಂದರ್ ಕುಮಾರ್ ಹಾಗೂ ಸಿಬಿಐ ನಿರ್ದಶಕ ಅಲೋಕ್ ವರ್ಮಾ ನಂತರ ನಿರ್ದೇಶಕ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಆಸ್ಥಾನಾ ವಿರುದ್ಧ ಮೊಯಿನ್ ಖುರೇಷಿ ಪ್ರಕರಣದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.

ಪ್ರಕರಣದಲ್ಲಿ ತಮ್ಮ ಹೆಸರು ಕೈ ಬಿಡಲು ಆಸ್ಥಾನಾ ಎರಡು ಕೋಟಿ ರೂ. ಲಂಚ ಪಡೆದಿದ್ದರು ಎಂದು ಹೈದರಾಬಾದ್‌ನ ಉದ್ಯಮಿ ಸತೀಶ್ ಸಿಬಿಐ ವಿಚಾರಣೆ ವೇಳೆ ಹೇಳಿಕೆ ನೀಡಿದ್ದರು.

ಡಿಸೆಂಬರ್‌ 2017ರಿಂದ ಹತ್ತು ತಿಂಗಳ ಅವಧಿಯಲ್ಲಿ ದುಬೈ ಮೂಲದ ಉದ್ಯಮಿ ಮನೋಜ್‌ ಪ್ರಸಾದ್‌ ಮೂಲಕ ಕಂತುಗಳಲ್ಲಿ ಹಣ ನೀಡಿರುವುದಾಗಿ ಸನಾ ಆರೋಪಿಸಿದ್ದಾರೆ. ಈ ಸಂಬಂಧ ಸಿಬಿಐಗೆ ದೂರನ್ನೂ ನೀಡಿದ್ದರು. 

ದೆಹಲಿಯಲ್ಲಿ ಮಾಂಸ ರಫ್ತು ವಹಿವಾಟು ನಡೆಸುವ ಖುರೇಷಿ ದುಬೈ, ಲಂಡನ್‌ ಮತ್ತು ಯುರೋಪ್‌ಗಳಿಗೆ 2000 ಕೋಟಿ ರುಪಾಯಿಗೂ ಅಧಿಕ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜೈಲುಗಳು ರೆಸಾರ್ಟ್‌ಗಳಾಗಿದ್ದು, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕೈಮೀರಿದೆ: ಆರ್.ಅಶೋಕ್ ಆತಂಕ
ಕಾಂಗ್ರೆಸ್‌ ಯೋಜನೆ ಹೆಸರು ಬದಲಿಸಿದ್ದೇ ಬಿಜೆಪಿ ಸಾಧನೆ: ಸಚಿವ ಸಂತೋಷ್‌ ಲಾಡ್‌ ವ್ಯಂಗ್ಯ