
ನವದೆಹಲಿ (ಫೆ.08): ಸಂಸತ್ತಿನಲ್ಲಿ ರಾಷ್ಟ್ರಪತಿಯವರ ವಂದನಾ ನಿರ್ಣಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಾ, ನೋಟು ಅಮಾನ್ಯ ಕ್ರಮವನ್ನು ಸಮರ್ಥಿಸಿಕೊಂಡರು.
ಭ್ರಷ್ಟಾಚಾರದ ವಿರುದ್ಧ ಸರ್ಕಾರ ಹೋರಾಡುತ್ತಿರುವುದು ರಾಜಕೀಯವಲ್ಲ. ಆದರೆ ತೃಣಮೂಲ ಕಾಂಗ್ರೆಸ್ ನೋಟು ಅಮಾನ್ಯದ ವಿರುದ್ಧ ಸಂಸತ್ತಿನ ಹೊರಗೆ ಪ್ರತಿಭಟನೆ ಮುಂದುವರೆಸಿತು. ನೋಟು ನಿಷೇಧವಾಗಿ 3 ತಿಂಗಳು ಕಳೆದರೂ ಟಿಎಂಸಿ ಸಂಸದರು ವಿತ್ ಡ್ರಾ ಮಿತಿಯ ನಿರ್ಬಂಧದ ಬಗ್ಗೆ ಪ್ರತಿಭಟಿಸಿದ್ದಾರೆ. ಆದರೆ ಜನರ ಅಂತರಂಗವನ್ನು ಅರ್ಥಮಾಡಿಕೊಳ್ಳಲು ಇದು ಸೂಕ್ತ ಸಮಯವಾಗಿತ್ತು ಎಂದು ಮೋದಿ ಹೇಳಿದ್ದಾರೆ.
ಜನರು ಮತ್ತು ಸರ್ಕಾರ ನೋಟು ನಿಷೇಧದ ಪರವಾಗಿದ್ದಾರೆ ಆದರೆ ವಿರೋಧ ಪಕ್ಷಗಳು ಮಾತ್ರ ಇದನ್ನು ಖಂಡಿಸುತ್ತಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.