
ನವದೆಹಲಿ: ಮುಸ್ಲಿಮರು ಒಂದು ಕೈಯಲ್ಲಿ ಕುರಾನ್ ಹೊಂದಿದ್ದರೆ, ಮತ್ತೊಂದರಲ್ಲಿ ಕಂಪ್ಯೂಟರ್ ಇರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ಜೋರ್ಡಾನ್ ದೊರೆ ಎರಡನೇ ಅಬ್ದುಲ್ಲಾ ಭಾಗವಹಿಸಿದ್ದ ಇಸ್ಲಾಮಿಕ್ ಪರಂಪರೆ ಕುರಿತ ಸಮಾವೇಶವೊಂದರಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಭಯೋತ್ಪಾದನೆ ವಿರುದ್ಧದ ಹೋರಾಟ ಯಾವುದೇ ಧರ್ಮದ ವಿರುದ್ಧವಲ್ಲ, ಆದರೆ ಯುವಕರನ್ನು ದಾರಿತಪ್ಪಿಸುವ ಮನಸ್ಥಿತಿಗಳ ವಿರುದ್ಧ. ಪ್ರತಿಯೊಂದು ಧರ್ಮವೂ ಮಾನವೀಯ ಮೌಲ್ಯಗಳನ್ನು ಪ್ರವರ್ತಿಸುತ್ತದೆ ಎಂದು ಅವರು ತಿಳಿಸಿದರು.
ಭಾರತ ಪ್ರಪಂಚದ ಎಲ್ಲ ಪ್ರಮುಖ ಧರ್ಮಗಳ ತೊಟ್ಟಿಲು. ಭಾರತೀಯ ಪ್ರಜಾಪ್ರಭುತ್ವ ತಲೆತಲಾಂತರದ ಬಹುತ್ವದ ಆಚರಣೆ. ಯುವಕರು ಇಸ್ಲಾಂನ ಮಾನವೀಯತೆಯೊಂದಿಗೆ ಗುರುತಿಸಿಕೊಳ್ಳಬೇಕು ಮತ್ತು ಆಧುನಿಕ ತಂತ್ರಜ್ಞಾನ ಬಳಸಲು ಅರ್ಹರಾಗಬೇಕು ಎಂದು ಅವರು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.