ಪಿಎನ್‌ಬಿ ವಂಚಕರ ವಿರುದ್ಧ ಕಠಿಣ ಕ್ರಮ: ಮೋದಿ

Published : Feb 24, 2018, 07:19 AM ISTUpdated : Apr 11, 2018, 01:13 PM IST
ಪಿಎನ್‌ಬಿ ವಂಚಕರ ವಿರುದ್ಧ ಕಠಿಣ ಕ್ರಮ: ಮೋದಿ

ಸಾರಾಂಶ

11,400 ಕೋಟಿ ರು. ಪಿಎನ್‌ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ನವದೆಹಲಿ: 11,400 ಕೋಟಿ ರು. ಪಿಎನ್‌ಬಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕೊನೆಗೂ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

‘ಹಣಕಾಸು ಅಕ್ರಮದ ಬಗ್ಗೆ ಈ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ ಮತ್ತು ಕಠಿಣ ಕ್ರಮ ಮುಂದುವರಿಯುತ್ತದೆ ಎಂಬುದನ್ನು ನಾನು ಸ್ಪಷ್ಟಪಡಿಸುತ್ತಿದ್ದೇನೆ’ ಎಂದು ಮೋದಿ ಹೇಳಿದರು. ಎಕಾನಮಿಕ್‌ ಟೈಮ್ಸ್‌ ಆಯೋಜಿಸಿದ್ದ ಜಾಗತಿಕ ಉದ್ಯಮ ಸಮಾವೇಶದಲ್ಲಿ ಮಾತನಾಡಿ ಅವರು ಈ ವಿಷಯ ತಿಳಿಸಿದರು. ಸಾರ್ವಜನಿಕರ ಹಣ ಲೂಟಿ ಮಾಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಅವರು ಹೇಳಿದರು.

ಯಾವುದೇ ಬ್ಯಾಂಕ್‌ ವಂಚನೆಯ ಆರೋಪಿಗಳ ಹೆಸರು ಪ್ರಸ್ತಾಪಿಸದ ಪ್ರಧಾನಿ, ಇಂತಹ ವಂಚನೆಗಳನ್ನು ತಡೆಯಲು ಹಣಕಾಸು ಸಂಸ್ಥೆಗಳು, ಲೆಕ್ಕಪರಿಶೋಧಕರು ಮತ್ತು ಮೇಲ್ವಿಚಾರಣಾ ಸಂಸ್ಥೆಗಳು ಶ್ರದ್ಧೆಯಿಂದ ಕಾರ್ಯ ನಿರ್ವಹಿಸಬೇಕು ಹೇಳಿದರು. ‘ನೀತಿ, ನಿಯಮಗಳು ಮತ್ತು ನೈತಿಕತೆ ನಿರ್ವಹಣೆಯ ಜವಾಬ್ದಾರಿ ಹೊತ್ತವರು ತಮ್ಮ ಕರ್ತವ್ಯ ಶ್ರದ್ಧೆ ಮತ್ತು ಬದ್ಧತೆಯಿಂದ ನಿರ್ವಹಿಸಬೇಕು ಎಂದು ಕೋರುತ್ತೇನೆ’ ಎಂದು ಅವರು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?