
ಆಗ್ರಾ,[ಜ.09]: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮೋದಿ ಸರ್ಕಾರ, ಮೇಲ್ಜಾತಿಗಳ ಬಡವರಿಗೆ ಮೀಸಲಾತಿ ನೀಡಿ ಭೇಷ್ ಎನಿಸಿಕೊಂಡಿದೆ.
ಇನ್ನು ಈ ಬಗ್ಗೆ ಉತ್ತರ ಪ್ರದೇಶದ ಆಗ್ರಾದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಗೆ ಮೀಸಲಾತಿ ಬೇಕಾಗಿತ್ತು. ನಾನು ಸಿಎಂ ಆಗಿದ್ದಾಗಲೇ ಈ ಬಗ್ಗೆ ಹೇಳಿದ್ದೆ ಈಗ ಮಾಡಿದ್ದೇನೆ ಎಂದು ಸಾರಿ ಸಾರಿ ಹೇಳಿದರು.
ಮೇಲ್ವರ್ಗ ಮೀಸಲಾತಿ ಪಡೆಯಲು 3 ಮಾನದಂಡಗಳು, ಯಾರಿಗೆ ಲಾಭ? ಇಲ್ಲಿದೆ ಮಾಹಿತಿ
ಮೇಲ್ಜಾತಿ ಬಡವರಿಗೆ ಮೀಸಲಾತಿ ನೀಡಲು ರಾಜಕೀಯ ಇಲ್ಲ. ಮೀಸಲಾತಿ ಕೊಡಿಸುವ ವಿಚಾರದಲ್ಲಿ ಲಾಭ-ನಷ್ಟದ ಮಾತಿಲ್ಲ ಎಂದು ಪ್ರಧಾನಿ ಮಂತ್ರಿ ಮೋದಿ ಸ್ಪಷ್ಟನೆ ನೀಡಿದರು.
ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನಮ್ಮ ಆಡಳಿತದ ಆತ್ಮವಾಗಿದ್ದು, ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಗಳ ಹಕ್ಕು ನೀಡಲು ಈ ಬಿಲ್ ಜಾರಿ ತರಲಾಗಿದೆ.
ಮೋದಿ ಮೀಸಲು ಅಸ್ತ್ರ: ಇಲ್ಲಿದೆ ಮಾಸ್ಟರ್ ಸ್ಟ್ರೋಕ್ನ ಕಂಪ್ಲೀಟ್ ಲೆಕ್ಕಾಚಾರ!
ಶೇಕಡ 10ರ ವಿಧೇಯಕದ ಬಗ್ಗೆ ರಾಜಕೀಯ ಮಾಡಲೇಬೇಡಿ ಎಂದು ಪ್ರತಿಪಕ್ಷಗಳ ವಿರುದ್ಧ ನರೇಂದ್ರ ಮೋದಿ ಕುಟುಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ