23 ದಿನದ 80 ಸಾವಿರ ರು. ವೇತನ ತ್ಯಜಿಸಿದ ಮೋದಿ!

Published : Apr 08, 2018, 08:40 AM ISTUpdated : Apr 14, 2018, 01:13 PM IST
23 ದಿನದ 80 ಸಾವಿರ ರು. ವೇತನ ತ್ಯಜಿಸಿದ ಮೋದಿ!

ಸಾರಾಂಶ

ಇದೇ ವೇಳೆ, ವೈಎಸ್ಸಾರ್‌ ಕಾಂಗ್ರೆಸ್‌, ತೆಲುಗುದೇಶಂ, ಕಾಂಗ್ರೆಸ್‌ ಹಾಗೂ ಎಡರಂಗಗಳು ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದರೂ ಕೆಲವು ಪ್ರಾದೇಶಿಕ ಪಕ್ಷಗಳ ಗಲಾಟೆಯಿಂದ ಇದನ್ನು ಕೈಗೆತ್ತಿಕೊಳ್ಳಲೂ ಆಗಲಿಲ್ಲ.

ನವದೆಹಲಿ: ಪ್ರತಿಪಕ್ಷಗಳ ಗದ್ದಲದಿಂದಾಗಿ ಸಂಸತ್ತಿನ ಬಜೆಟ್‌ ಅಧಿವೇಶನದ ಎರಡನೇ ಅವಧಿ ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 23 ದಿನಗಳ ವೇತನ ಮತ್ತು ಭತ್ಯೆಯ ಮೊತ್ತವಾದ 79,750 ರು.ಗಳನ್ನು ಮರಳಿಸಿದ್ದಾರೆ. ಅದೇ ರೀತಿ ಇತರ ಎನ್‌ಡಿಎ ಸಂಸದರು ಕೂಡ ವೇತನವನ್ನು ತ್ಯಜಿಸುವ ನಿರ್ಧಾರ ಕೈಗೊಂಡಿದ್ದಾರೆ.

ಜ.29ರಂದು ಆರಂಭವಾದ ಸಂಸತ್‌ ಅಧಿವೇಶನ ಶೂನ್ಯ ಸಾಧನೆಯ ಮೂಲಕ ಶುಕ್ರವಾರ ಅಂತ್ಯಗೊಂಡಿತ್ತು. ಅದರಲ್ಲೂ ಬಜೆಟ್‌ ಅಧಿವೇಶನದ ವಿಸ್ತರಿತ ಭಾಗ ಆರಂಭವಾದಾಗಿನಿಂತಲೂ ಕಾವೇರಿ ನಿರ್ವಹಣಾ ಮಂಡಳಿ ರಚನೆ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ, ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ಹಗರಣ, ಎಸ್‌ಸಿ-ಎಸ್‌ಟಿ ದೌರ್ಜನ್ಯ ಕಾಯ್ದೆಯಲ್ಲಿನ ಕೆಲವೊಂದು ಅಂಶಗಳ ಸಡಿಲಿಕೆ- ಇತ್ಯಾದಿ ವಿಷಯಗಳನ್ನು ಇಟ್ಟುಕೊಂಡು ನಡೆದ ಕೋಲಾಹಲದ ಕಾರಣ, ಸಂಸತ್ತಿನ ಉಭಯ ಸದನಗಳಲ್ಲೂ ಯಾವುದೇ ಕಲಾಪ ಸಾಧ್ಯವಾಗಿರಲಿಲ್ಲ. ಇದರಿಂದಾಗಿ 18 ವರ್ಷದಲ್ಲೇ ಅತಿ ಕಡಿಮೆ ಅವಧಿಯ ಕಲಾಪ ನಡೆದ ಅಧಿವೇಶನ ಎಂಬ ಅಪಖ್ಯಾತಿಗೂ ಇದು ತುತ್ತಾಗಿತ್ತು.

ಇದೇ ವೇಳೆ, ವೈಎಸ್ಸಾರ್‌ ಕಾಂಗ್ರೆಸ್‌, ತೆಲುಗುದೇಶಂ, ಕಾಂಗ್ರೆಸ್‌ ಹಾಗೂ ಎಡರಂಗಗಳು ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಮುಂದಾದರೂ ಕೆಲವು ಪ್ರಾದೇಶಿಕ ಪಕ್ಷಗಳ ಗಲಾಟೆಯಿಂದ ಇದನ್ನು ಕೈಗೆತ್ತಿಕೊಳ್ಳಲೂ ಆಗಲಿಲ್ಲ. ಈ ಬಿಕ್ಕಟ್ಟಿಗೆ ವಿಪಕ್ಷಗಳು ಕಾರಣ ಎಂದು ಸರ್ಕಾರ ಟೀಕಿಸಿದ್ದರೆ, ಕೇಂದ್ರದ ನಿಲುವುಗಳೇ ಇದಕ್ಕೆ ಕಾರಣ ಎಂದು ವಿಪಕ್ಷಗಳು ಟೀಕಿಸಿದ್ದವು. ಈ ಹಿನ್ನೆಲೆಯಲ್ಲಿ ವಿಪಕ್ಷಗಳಿಗೆ ಟಾಂಗ್‌ ನೀಡಲು, ಕಲಾಪ ವಿಫಲವಾದ 23 ದಿನಗಳ ವೇತನ ಮತ್ತು ಭತ್ಯೆಯನ್ನು ಎನ್‌ಡಿಎ ಸದಸ್ಯರು ನಿರಾಕರಿಸಲಿದ್ದಾರೆ ಎಂದು ಬಿಜೆಪಿ ಹೇಳಿತ್ತು. ಈ ನಿರ್ಧಾರದಿಂದ 3.66 ಕೋಟಿ ರು. ಸರ್ಕಾರಕ್ಕೆ ಮರಳಿಲಿದೆ ಎಂದು ಸಂಸದೀಯ ಖಾತೆ ಸಚಿವ ಅನಂತ್‌ಕುಮಾರ್‌ ಮಾಹಿತಿ ನೀಡಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ