
ನವದೆಹಲಿ : ಭಾರತ ದೇಶಕ್ಕೆ 1947ರಲ್ಲಿ ಸ್ವಾತಂತ್ರ್ಯ ಬಂದು ಮೊದಲು ಜವಹರ್ ಲಾಲ್ ನೆಹರು ಅವರು ಪ್ರಧಾನಿಯಾದಂದಿನಿಂದ ಇಂದಿನವರೆಗೂ ಕೂಡ ಆಗಸ್ಟ್ 15ರಂದು ಮಾತ್ರವೇ ಕೆಂಪು ಕೋಟೆಯ ಮೇಲೆ ಪ್ರಧಾನಿ ತ್ರಿವರ್ಣ ಧ್ವಜವನ್ನು ಹಾರಿಸುತ್ತಿದ್ದರು.
ಆದರೆ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 21 ರಂದು ಕೆಂಪು ಕೋಟೆ ಮೇಲೆ ಧ್ವಜಾರೋಹಣ ಮಾಡಲಿದ್ದಾರೆ.
ಇದರಿಂದ ಮೊದಲ ಬಾರಿಗೆ ಪ್ರಧಾನಿಯಿಂದ ಮತ್ತೊಂದು ಧ್ವಜಾರೋಹಣಕ್ಕೆ ಕೆಂಪು ಕೋಟೆ ಸಜ್ಜಾಗುತ್ತಿದೆ.
ಸುಭಾಷ್ ಚಂದ್ರ ಬೋಸ್ ಅವರ ಅಜಾದ್ ಹಿಂದ್ ಗವರ್ನಮೆಂಟ್ ಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ಧ್ವಜಾರೋಹಣ ಮಾಡುತ್ತಿದ್ದಾರೆ.
ಈಗಾಗಲೇ ಅನೇಕ ಜಯಂತಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಆರಂಭ ಮಾಡಿದ್ದು ಅದರಲ್ಲಿ ಇದೀಗ ಆಜಾದ್ ಹಿಂದ್ ವರ್ಷಾಚರಣೆಯ ಹಿನ್ನೆಲೆ ಧ್ವಜಾರೋಹಣವನ್ನು ಮಾಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.