ದೇಶದ 10 ಕೋಟಿ ಜನರಿಗೆ ಮೋದಿ ಪತ್ರ

Published : Oct 27, 2018, 07:32 AM ISTUpdated : Oct 27, 2018, 08:20 AM IST
ದೇಶದ 10 ಕೋಟಿ ಜನರಿಗೆ ಮೋದಿ ಪತ್ರ

ಸಾರಾಂಶ

ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಫೀಲ್ಡಿಗೆ ಇಳಿದಿದ್ದು, ಇದೀಗ 10 ಕೋಟಿ ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಅವರು ಪತ್ರ ಬರೆಯಲು ಉದ್ದೇಶಿಸಿದ್ದಾರೆ.

ನವದೆಹಲಿ: ದೇಶದ 50 ಕೋಟಿ ಬಡವರಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸುವ ವಿಶ್ವದ ಅತಿದೊಡ್ಡ ಯೋಜನೆ ‘ಆಯುಷ್ಮಾನ್‌ ಭಾರತ’ದ ಪ್ರಯೋಜನಗಳ ಕುರಿತು ಅರಿವು ಮೂಡಿಸಲು ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಫೀಲ್ಡಿಗೆ ಇಳಿದಿದ್ದಾರೆ. 10 ಕೋಟಿ ಫಲಾನುಭವಿಗಳಿಗೆ ಅವರು ಪತ್ರ ಬರೆಯಲು ಉದ್ದೇಶಿಸಿದ್ದಾರೆ.

ಬರಾಕ್‌ ಒಬಾಮಾ ಅವರು ಅಮೆರಿಕ ಅಧ್ಯಕ್ಷರಾಗಿದ್ದಾಗ ಜಾರಿಗೆ ತಂದಿದ್ದ ‘ಒಬಾಮಾ ಕೇರ್‌’ ರೀತಿಯಲ್ಲೇ ಭಾರತದ ‘ಮೋದಿ ಕೇರ್‌’ ಯೋಜನೆ ಎಂದು ಪ್ರಸಿದ್ಧಿಯಾಗಿರುವ ‘ಆಯುಷ್ಮಾನ್‌ ಭಾರತ’ ಬಗ್ಗೆ ಅದರ ಫಲಾನುಭವಿಗಳಲ್ಲಿ ಬಹುತೇಕರಿಗೆ ಮಾಹಿತಿ ಇಲ್ಲ. ಈ ಯೋಜನೆಗೆ ಹೊಸದಾಗಿ ನೋಂದಣಿ ಮಾಡಿಕೊಳ್ಳಬೇಕಾಗಿಲ್ಲ. ಸಾಮಾಜಿಕ- ಆರ್ಥಿಕ ಜನಗಣತಿಯಲ್ಲಿನ ಅಂಕಿ-ಅಂಶಗಳ ಸಹಾಯದಿಂದ ದೇಶದ ಶೇ.40ರಷ್ಟುಜನರನ್ನು ತನ್ನಿಂತಾನೇ ನೋಂದಣಿ ಮಾಡಲಾಗಿದೆ. ಹೀಗಾಗಿ ನೋಂದಣಿ ಕುರಿತ ಗೊಂದಲಗಳನ್ನು ಹೋಗಲಾಡಿಸಲು, ಯೋಜನೆಯ ಪ್ರಯೋಜನಗಳು ಏನು ಎಂಬುದನ್ನು ಜನರಿಗೆ ತಿಳಿಸಲು 50 ಕೋಟಿ ಫಲಾನುಭವಿಗಳ ಪೈಕಿ 10 ಕೋಟಿ ಮಂದಿಗೆ ಮೋದಿ ಪತ್ರ ಬರೆಯಲಿದ್ದಾರೆ ಎಂದು ನೀತಿ ಆಯೋಗದ ಸದಸ್ಯ ವಿನೋದ್‌ ಕೆ. ಪಾಲ್‌ ತಿಳಿಸಿದ್ದಾರೆ.

ಯೋಜನೆ ಜಾರಿಯಾದ ಒಂದೇ ತಿಂಗಳಲ್ಲಿ 1.12 ಲಕ್ಷ ಮಂದಿ ಇದರ ಪ್ರಯೋಜನ ಪಡೆದಿದ್ದು, 140 ಕೋಟಿ ರು. ಕ್ಲೇಮುಗಳಿಗೆ ಅಂಗೀಕಾರ ನೀಡಲಾಗಿದೆ. ವಾರ್ಷಿಕ 1200 ಕೋಟಿ ರು. ಹಣವನ್ನು ಈ ಯೋಜನೆಯಲ್ಲಿ ತೊಡಗಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ವಿದೇಶಗಳಿಗೆ ಭಾರತೀಯ ಪ್ರತಿಭೆ : ನಷ್ಟವೋ ? ಪ್ರಭಾವವೋ?