
ಬೆಂಗಳೂರು (ಮಾ.30): ನಾಳೆ ಬೆಳಿಗ್ಗೆ ಕರ್ನಾಟಕ ಸಂಸದರ ಜೊತೆ ಪಿಎಂ ಮೋದಿ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಲಿದ್ದಾರೆ. ಸಂಸದರ ಸಭೆಯಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ.
ನಾಳೆ ಬೆಳಿಗ್ಗೆ 9 ರಿಂದ 10 ಗಂಟೆಯವರೆಗೆ ಪ್ರಧಾನಿ ಅಧಿಕೃತ ನಿವಾಸ 7 ಲೋಕ ಕಲ್ಯಾಣ್ ಮಾರ್ಗದಲ್ಲಿ ನರೇಂದ್ರ ಮೋದಿ ಕರ್ನಾಟಕ, ಜಾರ್ಖಂಡ್, ಒರಿಸ್ಸಾ, ತಮಿಳುನಾಡು ಹಾಗೂ ತೆಲಂಗಾಣ ಸಂಸದರನ್ನು ಉಪಾಹಾರಕ್ಕೆ ಕರೆದಿದ್ದು ಪ್ರಧಾನಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಂಸದರ ಜೊತೆ ಮುಕ್ತ ಸಂವಾದ ನಡೆಸಲಿದ್ದಾರೆ.
ಕಳೆದ ಹತ್ತು ದಿನಗಳಿಂದ ಪ್ರಧಾನಿ ಮೋದಿ ಬಹುತೇಕ ರಾಜ್ಯಗಳ ಬಿಜೆಪಿ ಸಂಸದರೊಂದಿಗೆ ಚರ್ಚೆ ನಡೆಸುತ್ತಿದ್ದು ಗ್ರೌಂಡ್ ನಲ್ಲಿನ ಪರಿಸ್ಥಿತಿ ಬಗ್ಗೆ ಸಂಸದರ ಅಭಿಪ್ರಾಯವನ್ನು ಕೇಳುವುದರ ಜೊತೆಗೆ 2019 ರ ಲೋಕಸಭೆಗೆ ತಯಾರಿ ಕುರಿತು ಮೋದಿ ಕೆಲ ಟಿಪ್ಸ್ ಗಳನ್ನು ಕೂಡ ನೀಡುತ್ತಿದ್ದಾರೆ ಎಂದು ಅನಂತ್ ಕುಮಾರ್ ಹೇಳಿದ್ದಾರೆ.
2018 ರ ವಿಧಾಸಭಾ ಚುನಾವಣೆ ಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿರುವ ಸಂಸದರಿಗೆ ಮೋದಿ ಸ್ಪಷ್ಟವಾಗಿ ಇಲ್ಲ ಎಂದು ಹೇಳುವ ಸಾಧ್ಯತೆಗಳು ಕೂಡ ಇದ್ದು ಪ್ರಧಾನಿ ಎದುರು ಬಹಿರಂಗವಾಗಿ ಸಂಸದರು ಎಲ್ಲ ವಿಷಯಗಳನ್ನು ಪ್ರಸ್ತಾಪಿಸುತ್ತಾರೆಯೇ ಎನ್ನುವುದು ನಾಳೆ ಸ್ಪಷ್ಟವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.