ಕುಸಿಯುತ್ತಿದೆ ಮೋದಿ ಜನಪ್ರಿಯತೆ?: ರಾಹುಲ್ ಪ್ರಧಾನಿಯಾಗಲು ಇಲ್ಲ ಖ್ಯಾತೆ!

Published : Sep 05, 2018, 12:42 PM ISTUpdated : Sep 09, 2018, 09:28 PM IST
ಕುಸಿಯುತ್ತಿದೆ ಮೋದಿ ಜನಪ್ರಿಯತೆ?: ರಾಹುಲ್ ಪ್ರಧಾನಿಯಾಗಲು ಇಲ್ಲ ಖ್ಯಾತೆ!

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ದೇಶದ ಅತ್ಯಂತ ಜನಪ್ರಿಯ ನಾಯಕ! ಪ್ರಶಾಂತ್ ಕಿಶೋರ್ ನೇತೃತ್ವದ ಕಮಿಟಿ ಸಮೀಕ್ಷೆ ವರದಿ! ಮೋದಿ ಜನಪ್ರಿಯತೆ ಗ್ರಾಫ್ ಕುಸಿಯುತ್ತಿರುವ ಆತಂಕ! ಮೋದಿ ನಂತರದ ಸ್ಥಾನದಲ್ಲಿ ರಾಹುಲ್ ಗಾಂಧಿಗೆ ಸ್ಥಾನ! ಅರವಿಂದ್ ಕೇಜ್ರಿವಾಲ್ ಕೂಡ ಜನಪ್ರಿಯ ನಾಯಕನ ಪಟ್ಟಿಯಲ್ಲಿ  

ನವದೆಹಲಿ(ಸೆ.4): ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂಬುದಕ್ಕೆ ಹೊಸ ಸಮೀಕ್ಷೆ ಪುಷ್ಠಿ ನೀಡಿದೆ. 2014 ರ ಲೋಕಸಭೆ ಚುನಾವಣೆ ನಂತರ ದೇಶದ ಅತ್ಯಂತ ಪ್ರಭಾವಿ ರಾಜಕಾರಣಿಯಾಗಿ ಹೊರ ಹೊಮ್ಮಿದ್ದ ಪ್ರಧಾನಿ ಮೋದಿ, ನಾಲ್ಕು ವರ್ಷಗಳ ಬಳಿಕ ಅದೇ ಜನಪ್ರಿಯತೆಯನ್ನು ಕಾಪಾಡಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಸಮೀಕ್ಷೆ ತಿಳಿಸಿದೆ.

ಸದ್ಯ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಮತ್ತೊಮ್ಮೆ ಹೊರಹೊಮ್ಮಿದ್ದು, ಆದರೆ ಜನಪ್ರಿಯತೆಯ ಗ್ರಾಫ್ ಮಾತ್ರ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಏರುತ್ತಿದ್ದು, ಪ್ರಧಾನಿ ಮೋದಿ ಬಳಿಕ ರಾಹುಲ್ ಎರಡನೇ ಅತ್ಯಂತ ಜನಪ್ರಿಯ ರಾಜಕಾರಣಿಯಾಗಿ ಹೊರ ಹೊಮ್ಮಿದ್ದಾರೆ.

ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು, ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು ಸಮರ್ಥ ರಾಜಕಾರಣಿ ಎಂದು ಶೇ.48 ರಷ್ಟು ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುಲು ಮತ್ತು ದೂರದರ್ಶಿತ್ವ ಹೊಂದಿರುವ ನಾಯಕರಾಗಿ ನರೇಂದ್ರ ಮೋದಿ ಉತ್ತಮ ಆಯ್ಕೆ ಎಂದು ಸಮೀಕ್ಷೆಯಲ್ಲಿ ಜನ ಹೇಳಿದ್ದಾರೆ.

ಇನ್ನು ಪ್ರಧಾನಿ ಮೋದಿ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸ್ಥಾನ ಪಡೆದಿದ್ದಾರೆ. ರಾಹುಲ್ ಗಾಂಧಿ ಪರವಾಗಿ ಶೇ. 11 ರಷ್ಟು ಜನ ಮತ ನೀಡಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಶೇ. 9.3 ರಷ್ಟು ಮತ. ಅಖಿಲೇಶ್ ಯಾದವ್ ಶೇ.7 ಮಮತಾ ಬ್ಯಾನರ್ಜಿ ಶೇ. 4.2 ಮತ್ತು ಮಾಯಾವತಿ ಪರ ಶೇ.3.1 ರಷ್ಟು ಜನ ಮತ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆಯ ಶೈಕ್ಷಣಿಕ ಪುನರುಜ್ಜೀವನದ ಶಿಲ್ಪಿ ಶಾಮನೂರು
ಒಂದನೇ ತರಗತಿಯಿಂದಲೇ ಆಯುರ್ವೇದ ಕಲಿಸಿ: ರಾಘವೇಶ್ವರ ಭಾರತೀ ಸ್ವಾಮೀಜಿ ಸಲಹೆ