ನಾಲ್ಕೂವರೆ ವರ್ಷಗಳಲ್ಲಿ ಬದಲಾದ ವಾರಣಾಸಿ: ಮೋದಿ ಟ್ವೀಟ್ ವೈರಲ್

Published : Nov 12, 2018, 12:48 PM IST
ನಾಲ್ಕೂವರೆ ವರ್ಷಗಳಲ್ಲಿ ಬದಲಾದ ವಾರಣಾಸಿ: ಮೋದಿ ಟ್ವೀಟ್ ವೈರಲ್

ಸಾರಾಂಶ

ಭಾನುವಾರದಂಂದು ಪ್ರಧಾನಿ ಮೋದಿಯವರ ಟ್ವಿಟರ್ ಖಾತೆಯಿಂದ 'ಬದಲಾಗುತ್ತಿರುವ ಬನಾರಸ್'ನ 4 ಫೋಟೋಗಳನ್ನು ಶೇರ್ ಮಾಡಲಾಗಿದೆ. ಪ್ರಧಾನಿ ಮೋದಿಯ ಈ ಟ್ವೀಟ್‌ ನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಎಲ್ಲಾ ಸಚಿವರು ಹಾಗೂ ಕೇಂದ್ರ ಮಂತ್ರಿಗಳ ಟ್ವಿಟರ್ ಖಾತೆಯಿಂದ ರೀಟ್ವೀಟ್ ಮಾಡಲಾಗಿದೆ. ಇದಾದ ಬಳಿಕ ಜನಸಾಮಾನ್ಯರೂ ಈ ಫೋಟೋಗಳನ್ನು ಶೇರ್ ಮಾಡಲಾರಂಭಿಸಿದ್ದಾರೆ.

ಪ್ರಧಾನ ಮಂತ್ರಿ ಮೋದಿ 15ನೇ ಕಾಶಿ ಯಾತ್ರೆಗೂ ಮೊದಲು ಬದಲಾಗುತ್ತಿರುವ ಬನಾರಸ್ ಫೋಟೋಗಳು ಸಾಮಾಜಿಕ ತಾಣಗಳಲ್ಲಿ ಬಹಳಷ್ಟು ವೈರಲ್ ಆಗುತ್ತಿವೆ. ಈ ಫೋಟೋಗಳಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಬನಾರಸ್‌ನಲ್ಲಾದ ಬದಲಾವಣೆಗಳನ್ನು ಗಮನಿಸಬಹುದಾಗಿದೆ. ಪ್ರಧಾನಿ ಮೋದಿ ಸೋಮವಾರದಂದು ಲೋಕಾರ್ಪಣೆ ಮಾಡಲಿರುವ ಯೋಜನೆಗಳ ಫೋಟೋಗಳು ಇದರಲ್ಲಿವೆ.

ವಾಸ್ತವವಾಗಿ, ಭಾನುವಾರದಂಂದು ಪ್ರಧಾನಿ ಮೋದಿಯವರ ಟ್ವಿಟರ್ ಖಾತೆಯಿಂದ 'ಬದಲಾಗುತ್ತಿರುವ ಬನಾರಸ್'ನ  4 ಫೋಟೋಗಳನ್ನು ಶೇರ್ ಮಾಡಲಾಗಿದೆ. ಪ್ರಧಾನಿ ಮೋದಿಯ ಈ ಟ್ವೀಟ್‌ನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಸೇರಿದಂತೆ ಎಲ್ಲಾ ಸಚಿವರು ಹಾಗೂ ಕೇಂದ್ರ ಮಂತ್ರಿಗಳ ಟ್ವಿಟರ್ ಖಾತೆಯಿಂದ ರೀಟ್ವೀಟ್ ಮಾಡಲಾಗಿದೆ. ಇದಾದ ಬಳಿಕ ಜನಸಾಮಾನ್ಯರೂ ಈ ಫೋಟೋಗಳನ್ನು ಶೇರ್ ಮಾಡಲಾರಂಭಿಸಿದ್ದಾರೆ.

ಪಿಎಂ ಮೋದಿಯ ಟ್ವೀಟ್‌ನಲ್ಲಿ ರಿಂಗ್ ರೋಡ್‌ನ ನಾಲ್ಕು ಫೋಟೋಗಳನ್ನು ಶೇರ್ ಮಾಡುತ್ತಾ ''ಈ ಯೋಜನೆಗಳನ್ನು ನಾನು ನಾಳೆ ಉದ್ಘಾಟಿಸಲಿದ್ದೇನೆ. ಇದು ಕಾಶಿ ನಿವಾಸಿಗಳಿಗೆ ವ್ಯವಸ್ಥೆ ಕಲ್ಪಿಸುವ ಹಾದಿಯಾಗಲಿದೆ ಹಾಗೂ ಆರಾಮ ನೀಡಲಿದೆ. ಈ ಯಾತ್ರೆ ಸಮಯ ಹಾಗೂ ಇಂಧನ ಎರಡನ್ನೂ ಉಳಿಸಲಿದೆ'' ಎಂದಿದ್ದಾರೆ. 

ತಮ್ಮ ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ಇನ್ಮುಂದೆ ವಾರಣಾಸಿ ತಲುಪುವುದೂ ಸುಲಭವಾಗಲಿದೆ. ಜೌನ್‌ಪುರ್, ಸುಲ್ತಾನ್‌ಪುರ್ ಹಾಗೂ ಲಕ್ನೋ ತಲುಪುವುದೂ ಸುಲಭವಾಗುತ್ತದೆ. ಇದು ಕಾಶಿಯ ಜನರ ಗೆಲುವಾಗಿದೆ. 

ಇದಾದ ಬಳಿಕ ಮತ್ತೊಂದು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ದೀನಾಪುರ್ ಸೀವೇಜ್ ಟ್ರೀಟ್‌ಮೆಂಟ್ ಪ್ಲಾನ್‌ನ ನಾಲ್ಕು ಫೋಟೋಗಳನ್ನು ಶೇರ್ ಮಾಡುತ್ತಾ ಇದು ಕಾಶಿಯ ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ನಗರ ಹಾಗೂ ಆಸುಪಾಸಿನ ಪ್ರದೇಶಗಳಲ್ಲಿ ಇದು ಪ್ರಭಾವ ಬೀರಲಿದೆ. ಇವೆಲ್ಲದರೊಂದಿಗಗೆ ಗಂಗಾ ನದಿಯ ಸ್ವಚ್ಛತೆಗೆ ಇದು ಮತ್ತಷ್ಟು ಶಕ್ತಿ ತುಂಬಲಿದೆ ಎಂದಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಸೀದಿಗೆ ಅಡಿಗಲ್ಲು ಹಾಕಿದ ಟಿಎಂಸಿ ಶಾಸಕ
ಇಡಿಯಿಂದ ಮತ್ತೆ ಅನಿಲ್ ಅಂಬಾನಿ 1120 ಕೋಟಿ ಹೆಚ್ಚುವರಿ ಆಸ್ತಿ ಮುಟ್ಟುಗೋಲು