
ನವದೆಹಲಿ (ಏ.21): ತಮ್ಮ ಸಭೆಗಳಲ್ಲಿ ಮೊಬೈಲನ್ನು ಯಾಕೆ ನಿಷೇಧಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಧಿಕಾರಿಗಳ ಜೊತೆ ಚರ್ಚೆ ನಡೆಸುವಾಗ ಕೆಲವರು ಸಾಮಾಜಿಕ ಜಾಲತಾಣಗಳನ್ನು ಚೆಕ್ ಮಾಡುತ್ತಿರುತ್ತಾರೆ ಹಾಗಾಗಿ ಸಭೆಗಳಲ್ಲಿ ಮೊಬೈಲ್ ನಿಷೇಧಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.
ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡಾ ಇತ್ತೀಚಿನ ದಿನಗಳಲ್ಲಿ ಬ್ಯುಸಿಯಾಗಿದ್ದಾರೆ. ಹೆಚ್ಚಿನವರು ಸೋಷಿಯಲ್ ಮೀಡಿಯಾದಲ್ಲಿ ಕಾಲ ಕಳೆಯುವಿದನ್ನು ನಾನು ನೋಡಿದ್ದೇನೆ. ಹಾಗಾಗಿ ನನ್ನ ಸಭೆಗಳಲ್ಲಿ ಮೊಬೈಲನ್ನು ನಿಷೇಧಿಸಿದ್ದೇನೆ ಎಂದು ಪ್ರಧಾನಿ ಹೇಳಿದ್ದಾರೆ.
ಜನರ ಅಭಿವೃದ್ಧಿಗಾಗಿ ಸೋಷಿಯಲ್ ಮೀಡಿಯಾವನ್ನು ಬಳಸಬೇಕು. ಸ್ವಯಂ ಪ್ರಶಂಸೆಗಾಗಿ ಅಲ್ಲ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.