ಬಸವಣ್ಣನ ಹುಟ್ಟೂರಿಗೆ ಆಗಮಿಸುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ

Published : Feb 28, 2018, 02:59 PM ISTUpdated : Apr 11, 2018, 12:49 PM IST
ಬಸವಣ್ಣನ ಹುಟ್ಟೂರಿಗೆ ಆಗಮಿಸುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿ

ಸಾರಾಂಶ

ಮಾರ್ಚ್ 15ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಜಯಪುರಕ್ಕೆ ಭೇಟಿ ನೀಡಲಿದ್ದು ಆಗ ಬಸವಣ್ಣರ ಹುಟ್ಟೂರು ಇಂಗಳೇಶ್ವರಕ್ಕೆ ಭೇಟಿ ನೀಡುವಂತೆ ಆಹ್ವಾನಿಸಲಾಗಿದ್ದು ಅವರು ಭೇಟಿ ನೀಡುವ ನಿರೀಕ್ಷೆಯಿದೆ ಎಂದು ವಿರಕ್ತ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ನವದೆಹಲಿ: ಮಾರ್ಚ್ 15ಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಜಯಪುರಕ್ಕೆ ಭೇಟಿ ನೀಡಲಿದ್ದು ಆಗ ಬಸವಣ್ಣರ ಹುಟ್ಟೂರು ಇಂಗಳೇಶ್ವರಕ್ಕೆ ಭೇಟಿ ನೀಡುವಂತೆ ಆಹ್ವಾನಿಸಲಾಗಿದ್ದು ಅವರು ಭೇಟಿ ನೀಡುವ ನಿರೀಕ್ಷೆಯಿದೆ ಎಂದು ವಿರಕ್ತ ಮಠದ ಡಾ.ಸಿದ್ದಲಿಂಗ ಸ್ವಾಮೀಜಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂಗಳೇಶ್ವರದಲ್ಲಿ ಮಠದ ವತಿಯಿಂದ ಬಸವೇಶ್ವರ ವಚನ ಶಿಲಾಶಾಸನ ಮಂಟಪ ಮಾಡಲಾಗಿದೆ.

ಇದರಲ್ಲಿ ಬಸವಣ್ಣರ 1000 ಮತ್ತು ಇತರರ 600 ಸೇರಿ 600 ವಚನಗಳನ್ನು ಕಲ್ಲಿನಲ್ಲಿ ಕೆತ್ತಲಾಗಿದೆ. 1,70,000 ಅಕ್ಷರಗಳನ್ನು ಕಲ್ಲಿನಲ್ಲಿ ಕೆತ್ತಲಾಗಿದ್ದು ಇದೊಂದು ವಿಶ್ವದಾಖಲೆ. ಗೋರಖಪುರದಲ್ಲಿನ ಗೀತಾ ಮಂದಿರದಲ್ಲಿ ಭಗವದ್ಗಿತೆಯನ್ನು ಕಲ್ಲಿನಲ್ಲಿ ಕೆತ್ತಲಾಗಿದ್ದು ಅದು 23,000 ಅಕ್ಷರಗಳನ್ನು ಹೊಂದಿದ್ದು ವಿಶ್ವದಾಖಲೆಯಾಗಿತ್ತು.

ಈ ವಚನ ಶಿಲಾಶಾಸನವನ್ನು ಪ್ರಧಾನಿಗಳು ಉದ್ಘಾಟಿಸಬೇಕು ಎಂದು ಕೋರಲಾಗಿದೆ’ ಎಂದು ಸ್ವಾಮೀಜಿ ಹೇಳಿದರು. 1965ರಿಂದ ವಚನಗಳನ್ನು ಕಲ್ಲಿನಲ್ಲಿ ಕೆತ್ತುವ ಕೆಲಸ ಪ್ರಾರಂಭಿಸಲಾಗಿತ್ತು. ಸುಮಾರು 6 ಕೋಟಿ ವೆಚ್ಚದಲ್ಲಿ ಈ ಕೆಲಸ ನಡೆದಿದೆ ಎಂದು ಸ್ವಾಮೀಜಿ ಮಾಹಿತಿ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು
ನೆತನ್ಯಾಹು ಪ್ರಧಾನಿ ಮೋದಿಗೆ ಕರೆ ಮಾಡಿ ಮಾತುಕತೆ: ಭಯೋತ್ಪಾದನೆ ವಿರುದ್ಧ ದೊಡ್ಡ ನಿರ್ಧಾರ!