ಮೋದಿ - ಅಡ್ವಾಣಿ ರಹಸ್ಯ ಸಭೆ .. ! ಅಡ್ವಾಣಿ ಭವಿಷ್ಯ ನಿರ್ಧಾರ..?

Published : Jun 06, 2018, 10:57 AM IST
ಮೋದಿ - ಅಡ್ವಾಣಿ ರಹಸ್ಯ ಸಭೆ .. ! ಅಡ್ವಾಣಿ ಭವಿಷ್ಯ ನಿರ್ಧಾರ..?

ಸಾರಾಂಶ

ಹೆಚ್ಚೂಕಡಿಮೆ ತೆರೆಮರೆಗೆ ಸರಿದಿರುವ ಪಕ್ಷದ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಸಹ್ಯವಾಗಿ ಭೇಟಿ ಮಾಡಿ ಪ್ರಮುಖ ವಿಚಾರವೊಂದರ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ನವದೆಹಲಿ: ಹೆಚ್ಚೂಕಡಿಮೆ ತೆರೆಮರೆಗೆ ಸರಿದಿರುವ ಪಕ್ಷದ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್‌ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಬಯಸಿದ್ದಾರೆ ಎಂದು ಹೇಳಲಾಗಿದೆ.

90 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಪೃಥ್ವಿರಾಜ ರಸ್ತೆಯ ಅವರ ನಿವಾಸದಲ್ಲಿ ಇತ್ತೀಚೆಗೆ ಖುದ್ದು ಮೋದಿ ಅವರೇ ಭೇಟಿ ಮಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಕೂಡ ಟಿಕೆಟ್‌ ಪ್ರಸ್ತಾಪದೊಂದಿಗೆ ಅಡ್ವಾಣಿ ಜತೆಗೆ ಸಮಾಲೋಚನೆ ನಡೆಸಿದ್ದಾರೆ ಎಂದು ಬಂಗಾಳಿ ಪತ್ರಿಕೆಯೊಂದು ವರದಿ ಮಾಡಿದೆ. ಅಡ್ವಾಣಿ ಜತೆಗೆ ಮುರಳಿ ಮನೋಹರ ಜೋಶಿಗೂ ಟಿಕೆಟ್‌ ಲಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಪಕ್ಷದ ಪರಮೋಚ್ಚ ನೀತಿ ನಿರೂಪಣಾ ಮಂಡಳಿಯಾದ ಸಂಸದೀಯ ಪಕ್ಷದಲ್ಲಿ ಸ್ಥಾನವಂಚಿತರಾಗಿದ್ದ ಅಡ್ವಾಣಿ ಹಾಗೂ ಮತ್ತೊಬ್ಬ ಹಿರಿಯ ನಾಯಕ ಮುರಳಿ ಮನೋಹರ ಜೋಶಿ ಅವರಿಗಾಗಿ ಅಮಿತ್‌ ಶಾ ಅವರು ‘ಮಾರ್ಗದರ್ಶಕ ಮಂಡಳಿ’ ರಚಿಸಿದ್ದರು. ಮೋದಿ, ಸ್ವತಃ ಶಾ, ರಾಜನಾಥ ಸಿಂಗ್‌ ಜತೆಗೆ ಅಡ್ವಾಣಿ, ಜೋಶಿ ಸದಸ್ಯರಾಗಿರುವ ಈ ಮಂಡಳಿ ಈವರೆಗೆ ಒಮ್ಮೆಯೂ ಸಭೆ ಸೇರಿಲ್ಲ. ಇದು ಅಡ್ವಾಣಿ, ಜೋಶಿ ಅವರನ್ನು ಮೂಲೆಗುಂಪು ಮಾಡುವ ಪ್ರಯತ್ನ ಎಂದೇ ವಿಶ್ಲೇಷಿಸಲಾಗಿತ್ತು.

2014ರ ಲೋಕಸಭೆ ಚುನಾವಣೆಯಲ್ಲಿ ಗುಜರಾತಿನ ಗಾಂಧಿನಗರದಿಂದ ಎಲ್‌.ಕೆ. ಅಡ್ವಾಣಿ ಅವರು ಚುನಾಯಿತರಾಗಿದ್ದರು. ಕಾನ್ಪುರದಿಂದ ಜೋಶಿ ಆಯ್ಕೆಯಾಗಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾರತಹಳ್ಳಿ ಹೊಟೇಲ್ ಕಟ್ಟಡದಿಂದ ಯುವತಿ ಜಿಗಿತ ಪ್ರಕರಣ, ಪೊಲೀಸರ ಮೇಲೆ ಕಮಿಷನರ್‌ಗೆ ಮೂಡಿದ ಅನುಮಾನ?
ಜನ್ಮದಿನದಂದೇ ಹೆಚ್‌ಡಿಕೆ ತೋಳಿಗೆ ಬಂತು ದೈವಿ ಶಕ್ತಿ! 'ಶಿವ ತಾಯತ' ಕಟ್ಟಿದ ಬಿಜೆಪಿ ಕಾರ್ಯಕರ್ತರು!