‘ನಾನು ಭಯೋತ್ಪಾದನೆ ಮುಗಿಸಲು ಹೊರಟರೆ ವಿಪಕ್ಷ ನನ್ನನ್ನೇ ಮುಗಿಸಲು ಹೊರಟಿದೆ’!

Published : Mar 03, 2019, 05:13 PM IST
‘ನಾನು ಭಯೋತ್ಪಾದನೆ ಮುಗಿಸಲು ಹೊರಟರೆ ವಿಪಕ್ಷ ನನ್ನನ್ನೇ ಮುಗಿಸಲು ಹೊರಟಿದೆ’!

ಸಾರಾಂಶ

ಬಿಹಾರದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ| ಏರ್ ಸ್ಟ್ರೈಕ್ ಪುರಾವೆ ಕೇಳಿದ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನಿ| ‘ವಿಪಕ್ಷಗಳು ತಮ್ಮ ಹೇಳಿಕೆಗಳ ಮೂಲಕ ಪಾಕಿಸ್ತಾನವನ್ನು ಮೆಚ್ಚಿಸಲು ಹೊರಟಿವೆ’|‘ವಿಪಕ್ಷಗಳು ಭಾರತೀಯ ಸೇನೆ ಆತ್ಮಬಲವನ್ನು ಕುಗ್ಗಿಸಲು ಪ್ರಯತ್ನಿಸುತ್ತಿವೆ’|

ಪಾಟ್ನಾ(ಮಾ.03): ನಾನು ಭಯೋತ್ಪಾದನೆಯನ್ನು ತೊಡೆದು ಹಾಕಲು ಯತ್ನಿಸುತ್ತಿದ್ದರೆ, ಪ್ರತಿಪಕ್ಷಗಳು ನನ್ನನ್ನೇ ಮುಗಿಸಲು ಯತ್ನಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಭಯೋತ್ಪಾದಕ ತರಬೇತಿ ಶಿಬಿರದ ಮೇಲಿನ ವಾಯುದಾಳಿ ಬಳಿಕವೂ ವಿಪಕ್ಷಗಳು ತಮ್ಮ ಹೇಳಿಕೆಗಳ ಮೂಲಕ ಪಾಕಿಸ್ತಾನವನ್ನು ಮೆಚ್ಚಿಸಲು ಹೊರಟಿವೆ ಎಂದು ಹರಿಹಾಯ್ದರು.

ವಿರೋಧ ಪಕ್ಷಗಳು ಮೊನ್ನೆ ನಡೆದ ಏರ್ ಸ್ಟ್ರೈಕ್ ನ ಪುರಾವೆ ಕೇಳುವ ಮೂಲಕ, ಭಾರತೀಯ ಸೇನೆ ಆತ್ಮಬಲವನ್ನು ಕುಗ್ಗಿಸಲು ಪ್ರಯತ್ನಿಸುತ್ತಿವೆ ಎಂದು ಪ್ರಧಾನಿ ಕಿಡಿಕಾರಿದರು. 

ಭಾರತೀಯರೆಲ್ಲಾ ಒಂದಾಗಿ ಗಟ್ಟಿ ದನಿಯಲ್ಲಿ ನಮ್ಮ ಯೋಧರಿಗೆ ಸಲಾಂ ಎನ್ನುತ್ತಿರುವಾಗ 21  ವಿರೋಧ ಪಕ್ಷಗಳ ನಾಯಕರು ಅದನ್ನು ಖಂಡಿಸಿ ನಿರ್ಣಯ ಕೈಗೊಳ್ಳಲು ದೆಹಲಿಯಲ್ಲಿ ಸಭೆ ಸೇರುತ್ತಿದ್ದಾರೆ ಎಂದು ಮೋದಿ ವ್ಯಂಗ್ಯವಾಡಿದರು.

ಪಾಟ್ನಾದ ರ್ಯಾಲಿಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್,  ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ಮತ್ತು ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸಹ ಭಾಗವಹಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

5 States Assembly Election Results 2026: 'ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಲ ಬಿಚ್ಚಲು ಸಾಧ್ಯವಿಲ್ಲ' ತಮಿಳುನಾಡು, ಬಂಗಾಳ ಫಲಿತಾಂಶದ ಬಗ್ಗೆ ಬಿಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ!
ಟ್ರೆಂಡಿಂಗ್ ನೋಡುತ್ತಲೇ ತಮ್ಮ ಕಾರ್ಯಕರ್ತರಿಗೆ ಮಹತ್ವದ ಸಂದೇಶ ನೀಡಿದ ಮಮತಾ ಬ್ಯಾನರ್ಜಿ