
ಲಂಡನ್: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಕವನ ರಚನೆಗೆ ಖ್ಯಾತರಾಗಿದ್ದರು. ಇದೀಗ ಅವರ ಸಾಲಿಗೆ ಪ್ರಧಾನಿ ನರೇಂದ್ರ ಮೋದಿಯವರೂ ಸೇರಿದ್ದಾರೆ. ಪ್ರಧಾನಿ ಮೋದಿಯವರೂ ತಮ್ಮ ಮಾತೃಭಾಷೆಯಲ್ಲಿ ಕವನವೊಂದನ್ನು ಪ್ರಕಟಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಮ್ಮ ಮಾತೃಭಾಷೆ ಗುಜರಾತಿಯಲ್ಲಿ ತಾವು ಬರೆದ ‘ರಮತಾ ರಾಮ್ ಅಕೇಲಾ’ ಎಂಬ ಕವನವನ್ನು ಮೋದಿ ಟ್ವೀಟ್ ಮಾಡಿದ್ದಾರೆ.
ಲಂಡನ್ನಲ್ಲಿ ನಡೆದಿದ್ದ ‘ಭಾರತ್ ಕೀ ಬಾತ್, ಸಬ್ಕೇ ಸಾತ್’ ಕಾರ್ಯಕ್ರಮದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದ ಮೋದಿ, ತಾವು ಗುಜರಾತಿ ಭಾಷೆಯಲ್ಲಿ ಕವನ ರಚಿಸುವುದಾಗಿ ತಿಳಿಸಿದ್ದರು. ತಮ್ಮ ಕವನದ ಒಂದೆರಡು ಸಾಲುಗಳನ್ನು ತಿಳಿಸುವಂತೆ ಕೇಳಿಕೊಂಡಾಗ, ಸದ್ಯಕ್ಕೆ ನೆನಪಿಗೆ ಬರುತ್ತಿಲ್ಲ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕವನ ಪ್ರಕಟಿಸುವುದಾಗಿ ಭರವಸೆ ನೀಡಿದ್ದರು. ‘ಲಂಡನ್ ಕಾರ್ಯಕ್ರಮದಲ್ಲಿ ನಾನು ಪ್ರಸ್ತಾಪಿಸಿದ್ದ ನನ್ನ ‘ರಮತಾ ರಾಮ್ ಅಕೇಲಾ’ ಕವನ ಇಲ್ಲಿದೆ’ ಎಂದು ಟ್ವೀಟ್ ಮಾಡಿದ ಮೋದಿ, ಹತ್ತು ಸಾಲುಗಳ ಕವನ ಪ್ರಕಟಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.