
ಅಹಮದಾಬಾದ್: ಆಹಾರ ವಸ್ತುಗಳ ಮಾರಾಟದ ಕಮಿಷನ್ ಮೊತ್ತ ಹೆಚ್ಚಳ ಸೇರಿದಂತೆ ನ್ಯಾಯಬೆಲೆ ಅಂಗಡಿಕಾರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಳ್ಳುವುದಾಗಿ ಬಿಜೆಪಿ ಗುಜರಾತ್ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಎಚ್ಚರಿಕೆ ನೀಡಿದ್ದಾರೆ.
ತಮ್ಮ ಬೇಡಿಕೆಗಳ ಪಟ್ಟಿಯನ್ನು ಸೋಮವಾರ ಗುಜರಾತ್ ಸರ್ಕಾರಕ್ಕೆ ಸಲ್ಲಿಸಿ ಬಳಿಕ ಮಾತನಾಡಿದ ಗುಜರಾತ್ ನ್ಯಾಯ ಬೆಲೆ ಅಂಗಡಿ ಮಾಲೀಕರ ಸಂಘದ ಅಧ್ಯಕ್ಷರೂ ಆದ ಮೋದಿ ಸಹೋದರ ಪ್ರಹ್ಲಾದ್ ಮೋದಿ, ‘ರಾಜ್ಯದಲ್ಲಿ ನ್ಯಾಯ ಬೆಲೆ ಅಂಗಡಿ ಮಾಲೀಕರಿಗೆ ಪ್ರತಿ ಕ್ವಿಂಟಲ್ಗೆ 85 ರು. ನೀಡಲಾಗುತ್ತಿದೆ. ಆದರೆ, ರಾಜಸ್ಥಾನ ಮತ್ತು ದೆಹಲಿ ಸೇರಿ ಇತರ ರಾಜ್ಯಗಳಲ್ಲಿ 200 ರು.ಗೂ ಹೆಚ್ಚು ಕಮಿಷನ್ ನೀಡಲಾಗುತ್ತಿದೆ. ಇದೇ ರೀತಿ ಕಮಿಷನ್ ನಮಗೂ ನೀಡಬೇಕು’ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.