ಕನ್ನಡಿಗರ ಕೆಲಸ ಕಿತ್ತುಕೊಂಡ ಮೋದಿ : ರಾಹುಲ್

Published : Jul 21, 2018, 12:43 PM ISTUpdated : Jul 21, 2018, 12:48 PM IST
ಕನ್ನಡಿಗರ ಕೆಲಸ ಕಿತ್ತುಕೊಂಡ ಮೋದಿ : ರಾಹುಲ್

ಸಾರಾಂಶ

ರಫೇಲ್ ಯುದ್ಧ ವಿಮಾನ ಖರೀದಿ ವಿಷಯದಲ್ಲಿ ರಕ್ಷಣಾ ಸಚಿವರು ಮತ್ತು ಮೋದಿ ದೇಶದ ಜನರ ಕಣ್ಣಿಗೆ ಮಣ್ಣೆರಚಿದ್ದಾರೆ. ಯುದ್ಧ ವಿಮಾನ ನಿರ್ಮಿಸುವ ಗುತ್ತಿಗೆಯನ್ನು ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ಗೆ ತಪ್ಪಿಸುವ ಮೂಲಕ ಕರ್ನಾಟಕದ ಯುವಕರಿಗೆ ಉದ್ಯೋಗ ತಪ್ಪಿಸಿದ್ದಾರೆ ಎಂದು ರಾಹುಲ್ ಗಾಂಧಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ನವದೆಹಲಿ: ರಫೇಲ್ ಯುದ್ಧ ವಿಮಾನ ನಿರ್ಮಾಣ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಯುವಕರ ಕೆಲಸ ಕಿತ್ತು ಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದರು. 

ಅವಿಶ್ವಾಸ ಗೊತ್ತುವಳಿ ಮೇಲೆ ಮಾತಾಡಿದ ರಾಹುಲ್, ‘ರಫೇಲ್ ಯುದ್ಧ ವಿಮಾನ ಖರೀದಿ ವಿಷಯದಲ್ಲಿ ರಕ್ಷಣಾ ಸಚಿವರು ಮತ್ತು ಮೋದಿ ದೇಶದ ಜನರ ಕಣ್ಣಿಗೆ ಮಣ್ಣೆರಚಿದ್ದಾರೆ. ಯುದ್ಧ ವಿಮಾನ ನಿರ್ಮಿಸುವ ಗುತ್ತಿಗೆ ಸರ್ಕಾರಿ ಸ್ವಾಮ್ಯದ ಎಚ್‌ಎಎಲ್‌ಗೆ ತಪ್ಪಿಸುವ ಮೂಲಕ ಕರ್ನಾಟಕದ ಯುವಕರಿಗೆ ಉದ್ಯೋಗ ತಪ್ಪಿಸಿದ್ದಾರೆ. 

ಒಂದೂ ವಿಮಾನ ತಯಾರಿಸದ, 30000 ಕೋಟಿ ರು. ಸಾಲ ಹೊಂದಿರುವ ತಮ್ಮ ಆಪ್ತ ಉದ್ಯಮಿಗೆ ರಫೇಲ್ ಯುದ್ಧ ವಿಮಾನ ನಿರ್ಮಾಣ ಗುತ್ತಿಗೆ ಕೊಡಿಸಿದ್ದಾರೆ’ ಎಂದು ಆರೋಪಿಸಿದರು.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್
ಕನ್ನಡದ 'ತ್ರಿಮೂರ್ತಿ'ಗಳ ಸಂಗಮಕ್ಕೆ ಸಾಕ್ಷಿಯಾಗಲಿದ್ದಾರೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್