
ನವದೆಹಲಿ(ಜು.03): ರಾಷ್ಟ್ರಪತಿ ಪ್ರಣಬ್ ಮುಖರ್ಜಿ ತಮ್ಮ ಅಧಿಕಾರಾವಧಿಯ ಕೊನೆಯಲ್ಲಿದ್ದಾರೆ. ಈ ಸಂಧರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಯವರನ್ನು ಹಾಡಿ ಹೊಗಳಿದ್ದಾರೆ. ಅಲ್ಲದೇ, ತಾವು ಪ್ರಧಾನಿಯಾಗಿ ದೆಹಲಿಗೆ ಬಂದಿದ್ದಾಗ, ತಮ್ಮನ್ನ ತಂದೆಯ ಸ್ಥಾನದಲ್ಲಿ ನಿಂತು ನೋಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಿನ್ನೆ, ರಾಷ್ಟ್ರಪತಿ ಭವನದಲ್ಲಿ 'ಪ್ರಣಬ್ ಮುಖರ್ಜಿ- ಎ ಸ್ಟೇಟ್ಸ್ ಮನ್' ಎಂಬ ಫೋಟೋ ಆಲ್ಪಮ್ ಬಿಡುಗಡೆಗೊಳಿಸಲಾಯಿತು. ಈ ವೇಳೆ, ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ತನ್ನ ಹಾಗೂ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ನಡುವಿನ ಭಾಂದವ್ಯವನ್ನು ಸ್ಮರಿಸಿಕೊಂಡಿದ್ದಾರೆ. ತಾವು ಪ್ರಧಾನಿಯಾಗಿ ದೆಹಲಿಗೆ ಬಂದಾಗ, ತಮ್ಮ ಮಾರ್ಗದರ್ಶಕರಾಗಿದ್ದವರು ಪ್ರಣಬ್ ಮುಖರ್ಜಿ. ನಾನು ಉತ್ತರಪ್ರದೇಶ ಚುನಾವಣಾ ಪ್ರಚಾರದಲ್ಲಿ ಮಗ್ನನಾಗಿದ್ದಾಗ, ಪ್ರಣಬ್ ಮುಖರ್ಜಿಯವರು, ಗೆಲುವು-ಸೋಲು ಇದ್ದಿದ್ದೇ, ಆದರೆ ನಿಮ್ಮ ಆರೋಗ್ಯದ ಬಗ್ಗೆ ಗಮನಹರಿಸಿ ಎಂದು ನನಗೆ ಹೇಳಿದ್ದರು. ಅಲ್ಲದೇ, ಇನ್ನು ಅನೇಕ ಸಂದರ್ಭಗಳಲ್ಲಿ ನನ್ನ ಕಾಳಜಿ ವಹಿಸಿದ್ದಾರೆ ಎಂದು ಗದ್ಗದಿತರಾಗಿಯೇ ನುಡಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.