ಕೇಂದ್ರದ ಯೋಜನೆಗಳ ಗುರಿ ಮುಟ್ಟಲು ಬಿಜೆಪಿ ಮಾಸ್ಟರ್ ಪ್ಲಾನ್

Published : Aug 29, 2018, 09:51 AM ISTUpdated : Sep 09, 2018, 09:19 PM IST
ಕೇಂದ್ರದ ಯೋಜನೆಗಳ ಗುರಿ ಮುಟ್ಟಲು ಬಿಜೆಪಿ ಮಾಸ್ಟರ್ ಪ್ಲಾನ್

ಸಾರಾಂಶ

ಕೇಂದ್ರದ ಯೋಜನೆಗಳ ಗುರಿ ಮುಟ್ಟಲು ಬಿಜೆಪಿ ಸಿಎಂಗಳ ಸಭೆ ನಿರ್ಧಾರ | ಪ್ರಧಾನಿ ಮೋದಿ. ಅಮಿತ್ ಶಾ ನೇತೃತ್ವದಲ್ಲಿ ಸಭೆ |  

ನವದೆಹಲಿ (ಆ. 29): 2019ರ ಲೋಕಸಭಾ ಹಾಗೂ ಕೆಲವು ರಾಜ್ಯ ವಿಧಾನಸಭಾ ಚುನಾವಣೆಗಳಲ್ಲಿ ಮರಳಿ ಅಧಿಕಾರ ಪಡೆಯುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ, ಗ್ರಾಮ ಸ್ವರಾಜ್‌ ಸೇರಿದಂತೆ ಇತರ ಕಲ್ಯಾಣ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕೈಗೊಳ್ಳಬೇಕಾದ ಕ್ರಮದ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಮಂಗಳವಾರ ಬಿಜೆಪಿ ಮುಖ್ಯಮಂತ್ರಿಗಳ ಸಭೆ ನಡೆಸಿದರು.

ಈ ಸಭೆಯಲ್ಲಿ ನಿರ್ದಿಷ್ಟಕಾಲಾವಧಿಯಲ್ಲಿ ಸ್ವಚ್ಛ ಭಾರತ ಯೋಜನೆ ತನ್ನ ಗುರಿ ಮುಟ್ಟುವುದು. 48000 ಗ್ರಾಮಗಳಲ್ಲಿ ಕೈಗೊಳ್ಳಲಾಗಿರುವ ಗ್ರಾಮ ಸ್ವರಾಜ್‌ ಯೋಜನೆ, ಬಡವರಿಗೆ ಅಡುಗೆ ಅನಿಲ ಸಂಪರ್ಕ, ಎಲ್‌ಇಡಿ ಬಲ್ಬ್  ವಿತರಣೆ ಸೇರಿದಂತೆ ಕೇಂದ್ರ ಕೈಗೊಂಡಿರುವ 7 ಕಲ್ಯಾಣ ಯೋಜನೆಗಳು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದರ ಬಗ್ಗೆ ಚರ್ಚಿಸಲಾಯಿತು. ಇನ್ನು ಆಯುಷ್ಮಾನ್‌ ಭಾರತ ಜಾರಿ ಬಗ್ಗೆಯೂ ಚರ್ಚೆ ನಡೆಯಿತೆಂದು ಮೂಲಗಳು ಹೇಳಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್
ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್