ಓಖಿ ಅಬ್ಬರಕ್ಕೆ 12 ಬಲಿ : ನೆರವಿನ ಭರವಸೆ ನೀಡಿದ ಪ್ರಧಾನಿ

Published : Dec 02, 2017, 02:20 PM ISTUpdated : Apr 11, 2018, 01:10 PM IST
ಓಖಿ ಅಬ್ಬರಕ್ಕೆ 12 ಬಲಿ : ನೆರವಿನ ಭರವಸೆ ನೀಡಿದ ಪ್ರಧಾನಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದು, ಸೂಕ್ತ ನೆರವನ್ನು ನೀಡುವ ಭರವಸೆ ನೀಡಿದ್ದಾರೆ.

ಚೆನ್ನೈ(ಡಿ.2): ಓಖಿ ಚಂಡಮಾರುತಕ್ಕೆ ತಮಿಳುನಾಡು ಕೇರಳ ರಾಜ್ಯಗಳು ತತ್ತರಿಸಿದ್ದು, ಈಗಾಗಲೇ ಚಂಡಮಾರುತಕ್ಕೆ 12 ಮಂದಿ ಬಲಿಯಾಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿದ್ದು, ಸೂಕ್ತ ನೆರವನ್ನು ನೀಡುವ ಭರವಸೆ ನೀಡಿದ್ದಾರೆ.

ಚಂಡಮಾರುತದಿಂದ ಸದ್ಯ ಹಲವು ಮೀಗಾರರೂ ಕೂಡ ಕಣ್ಮರೆಯಾಗಿದ್ದು, ಕಣ್ಮರೆಯಾದ ಮೀನುಗಾರರಿಗಾಗಿ ಶೋಧ ನಡೆಸಲಾಗುತ್ತಿದೆ.  ರಕ್ಷಣೆಗಾಗಿ  ಹರಸಾಹಸ ಪಡಲಾಗುತ್ತಿದೆ. ಇದುವರೆಗೆ ಒಟ್ಟು 200 ಮಂದಿಯನ್ನು  ರಕ್ಷಣೆ ಮಾಡಲಾಗಿದೆ.

ಚಂಡಮಾರುತದಿಂದ ಭಾರೀ ಪ್ರಮಾಣದಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ಮಳೆ ಸುರಿಯುತ್ತಿದ್ದು,  ಆಹಾರ ಹಾಗೂ ಕುಡಿಯುವ ನೀರಿಗಾಗಿ ಹಾಹಾಕಾರ ಏರ್ಪಟ್ಟಿದೆ.

ಚಂಡಮಾರುತದ ವೇಳೆ ಸಮುದ್ರದಲ್ಲಿ ಮುಳುಗಿದ ಬೋಟ್’ಗಳಲ್ಲಿದ್ದ 14 ಮಂದಿಯನ್ನು  ರಕ್ಷಣೆ ಮಾಡಲಾಗಿದ್ದು, 8 ಸಿಬ್ಬಂದಿ ಬಗ್ಗೆ ಇನ್ನಾದರೂ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, ಆಸ್ಪತ್ರೆಯಲ್ಲೇ 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆತ್ಮ*ಹತ್ಯೆ ಯತ್ನ!
2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು: ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ