
ವಾರಾಣಸಿ(ಡಿ.23) ಹಲವು ವಿಶಿಷ್ಟತೆಗಳ ಮೂಲಕ ಗಮನ ಸೆಳೆಯುವ ಪ್ರಧಾನಮಂತ್ರಿ ರೇಂದ್ರಮೋದಿ ಈ ಬಾರಿ ಸಾರ್ವಜನಿಕ ಸಭೆಗೆ ತಮ್ಮ ಊಟವನ್ನ ತಾವೇ ತೆಗೆದುಕೊಂಡು ಬರುವ ಮೂಲಕ ಗಮನ ಸೆಳೆದಿದ್ದಾರೆ.
ವಾರಾಣಸಿಯಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತೆರಳಿದ್ದ ಮೋದಿ ಈ ಕಾರ್ಯಕ್ರಮಕ್ಕೆ ತಮ್ಮ ಮನೆಯಿಂದಲೇ ಮಧ್ಯಾಹ್ನದ ಊಟವನ್ನ ಕಟ್ಟಿಕೊಂಡು ಬಂದಿದ್ದರು. ಈ ಕುರಿತು, ಪ್ರತಿಕ್ರಿಯಿಸಿರುವ ಮೋದಿ ನಾನೂ ಸಹ ಪಕ್ಷದ ಕಾರ್ಯಕರ್ತ, ಕಾರ್ಯಕರ್ತರಿಗೆ ಮನೆಯಿಂದಲೇ ಬುತ್ತಿ ತರುವಂತೆ ಸೂಚಿಸಲಾಗಿತ್ತು. ಹೀಗಾಗಿ, ನಾನೂ ಸಹ ಬುತ್ತಿ ತಂದಿದ್ದೇನೆ ಎಂದು ಹೇಳಿದ್ದಾರೆ. ಈ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಪೋಸ್ಟ್ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.