
ನವದೆಹಲಿ(ನ.23): ಕೊನೆಗೂ ಪ್ರತಿಪಕ್ಷಗಳ ಆಗ್ರಹಕ್ಕೆ ಮಣಿದ ಪ್ರಧಾನಿ ನರೇಂದ್ರಮೋದಿ ಇವತ್ತು ಲೋಕಸಭೆ ಕಲಾಪಕ್ಕೆ ಹಾಜರಾಗಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆ, ಸದನಕ್ಕೆ ಆಗಮಿಸಿದ ಮೋದಿ, ತಮ್ಮ ಕುರ್ಚಿಯಲ್ಲಿ ಆಸೀನರಾದರು. ಈ ವೇಳೆ, ಪ್ರತಿಪಕ್ಷಗಳು ಮೋದಿ ಹೇಳಿಕೆ ನೀಡುವಂತೆ ಬಿಗಿಪಟ್ಟುಹಿಡಿದರು.
ಇದರಿಂದ, ಸದನದಲ್ಲಿ ತೀವ್ರ ಗದ್ದಲ ಉಂಟಾಯಿತು. ಸ್ಪೀಕರ್ ಸುಮಿತ್ರಾಮಹಾಜನ್, ಕಲಾಪದ ನಿಯಮ 377 ಪ್ರಕಾರ, ಬೇಕಾದಂತೆ ಮಾತನಾಡುವಂತಿಲ್ಲ. ಅವಕಾಶ ಸಿಕ್ಕಾಗ ಮಾತನಾಡಬೇಕೆಂದು ತಾಕೀತು ಮಾಡಿದರು. ಇದರಿಂದ ಗದ್ದಲ, ಕೋಲಾಹಲ ತೀವ್ರಗೊಂಡಿತು. ಹೀಗಾಗಿ, ಕಲಾಪವನ್ನು ಕೆಲಹೊತ್ತುಮುಂದೂಡಲಾಯ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.