
ನವದೆಹಲಿ[ಡಿ.03] ಮೋದಿ ಅವರ ಹಿಂದುತ್ವದ ಬಗ್ಗೆ ಹಿಂದೊಮ್ಮೆ ಪ್ರಶ್ನೆ ಮಾಡಿದ್ದ ರಾಹುಲ್ ಗಾಂಧಿಗೆ ಪ್ರಧಾನಿ ಮೋದಿ ಸರಿಯಾದ ಸಮಯದಲ್ಲಿ ತಿರುಗೇಟು ನೀಡಿದ್ದಾರೆ.
ಹಿಂದುತ್ವದ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಲು ಸಾಮಾನ್ಯ ಮನುಷ್ಯರಿಗೆ ಸಾಧ್ಯವಿಲ್ಲ. ಸಾಧುಗಳು, ಋಷಿ ಮುನಿಗಳಿಗೂ ಇದನ್ನು ಸಂಪೂರ್ಣ ಅರಗಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ರಾಹುಲ್ಗೆ ಕಟುಕಿದರು. ಮೋದಿಯವರ ಈ ವಾಗ್ದಾಳಿಗೆ ಸಾಕ್ಷಿಯಾಗಿದ್ದು ರಾಜಸ್ಥಾನದ ಜೋಧಪುರದ ಚುನಾವಣಾ ಪ್ರಚಾರ ಸಮಾವೇಶ.
ರಾಹುಲ್ ಗಾಂಧಿ ಹೆಸರು ಹೇಳದೆ ಒಂದರ ಮೇಲೊಂದು ಏಟು ನೀಡುತ್ತಲೇ ಹೋದ ಮೋದಿ,, ನಾನೊಬ್ಬ ಸಾಮಾನ್ಯ ಮನುಷ್ಯ..ಜ್ಞಾನಿಗಳಿಗೆ ಮಾತ್ರ ಹಿಂದುತ್ವದ ಅರಿವಿರುತ್ತದೆ. ಕೆಲವರಿಗೆ ಚುನಾವಣೆ ಸಂದರ್ಭ ಬಂದಾಗ ಮಾತ್ರ ಹಿಂದುತ್ವ ನೆನಪಾಗುತ್ತದೆ ಎಂದು ತಮ್ಮ ಭಾಷಣದ ಉದ್ದಕ್ಕೂ ಹೆಸರು ಹೇಳದೆಯೇ ರಾಹುಲ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.